Wednesday, February 12, 2025

ರೋಟರಿ ಒಗ್ಗೂಡಿಸುವ, ಬಾವೈಕ್ಯತೆಯ ಕೆಲಸ ಮಾಡುತ್ತದೆ : ರೋಹಿನಾಥ್ ಪಾದೆ

ಬಂಟ್ವಾಳ: ಅಂತಾರಾಷ್ಟ್ರೀಯ ರೋಟರಿಯಲ್ಲಿ ಸದಸ್ಯತನ ಅಭಿವೃದ್ಧಿಯಲ್ಲಿ  ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181ಮುಂಚೂಣಿಯಲ್ಲಿದೆ, ರೋಟರಿ, ಸ್ನೇಹ   ಸೌಹಾರ್ದತೆ, ಬಾವೈಕ್ಯತೆ, ಒಗ್ಗೂಡಿ ಸಾಮರಸ್ಯಕ್ಕೆ ಆದ್ಯತೆ ನೀಡುತ್ತದೆ. ಪರಂಗಿಪೇಟೆ ಯಲ್ಲಿ ಪ್ರಜ್ಞಾವಂತರು ರೋಟರಿ ಮೂಲಕ ಒಟ್ಟು ಸೇರುವುದು ಶ್ಲಾಘನೀಯ ಎಂದು ರೋಟರಿ ಜಿಲ್ಲೆ 3181ರ ಜಿಲ್ಲಾ ಗವರ್ನರ್ ರೋಹಿನಾಥ್ ಪಾದೆ ಹೇಳಿದರು.
      ಅವರು ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಾಯೋಜಕತ್ವದಲ್ಲಿ  ಸೇವಾಂಜಲಿ ಸಭಾಂಗಣದಲ್ಲಿ ನಡೆದ     ನೂತನ ರೋಟರಿ ಕ್ಲಬ್ ಪರಂಗಿಪೇಟೆ ಯ  ಸನ್ನದು ಪ್ರಧಾನ ಮಾಡಿ ಮಾತನಾಡಿದರು. ರೋಟರಿ ಕ್ಲಬ್ ಪರಂಗಿಪೇಟೆಯ ನೂತನ ಅಧ್ಯಕ್ಷರಾದ ಜಯರಾಮ ಶೇಖ ನೇತೃತ್ವದ 47 ಸದಸ್ಯರನ್ನು ರೋಟರಿ ಪಿನ್, ಪ್ರಮಾಣ ಪತ್ರ ನೀಡಿ ಪದ ಪ್ರದಾನ ಮಾಡಿದರು. ಸೇವಾಂಜಲಿಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ ಕೃಷ್ಣ ಕುಮಾರ್ ಪೂಂಜ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ರೋಟರಿ ಜಿಲ್ಲಾ ಕ್ಲಬ್ ವಿಸ್ತರಣಾಧ್ಯಕ್ಷ ಶೇಖರ್ ಶೆಟ್ಟಿ ನೂತನ ಸದಸ್ಯರಿಗೆ ಪುನಶ್ಚೇತನ ತರಬೇತಿ ನೀಡಿ ರೋಟರಿ ಕಾರ್ಯವಿಧಾನದ ಬಗ್ಗೆ ಪ್ರಸ್ತಾಪ ಮಾಡಿದರು. ಸಮಾರಂಭದಲ್ಲಿ ರೋಟರಿ ಜಿಲ್ಲೆ3181ಇದರ ವಲಯ 4ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ಗವರ್ನರ್ ವಿಶೇಷ ಪ್ರತಿನಿಧಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಜಯರಾಜ್ ಬಂಗೇರ ಉಪಸ್ತಿತರಿದ್ದರು. ಸಭಾಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಸ್ವಾಗತಿಸಿದರು ನೂತನ ಕಾರ್ಯದರ್ಶಿ ರಮೇಶ್ ಶೆಟ್ಟಿ ಧನ್ಯವಾದ ಸಲ್ಲಿಸಿದರು. ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ ನೂತನ ಸದಸ್ಯರನ್ನು ಪರಿಚಯ ಮಾಡಿದರು , ನರೇಂದ್ರ ನಾಥ ಭಂಡಾರಿ ಕಾರ್ಯಕ್ರಮ ನಿರೂಪಣೆ ಮಾಡಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...