Friday, January 30, 2026

ಮೇ.28 ಕ್ಕೆ ರೋಟರಿ ಗವರ್ನರ್ ಲೊರೆಟ್ಟೋ ಹಿಲ್ಸ್ ಗೆ ಅಧಿಕೃತ ಭೇಟಿ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಮುಂದಾಳತ್ವದಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ನೂತನವಾಗಿ ಅಸ್ತಿತ್ವಕ್ಕೆ ಬಂದ ಲೋರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಲೊರೆಟ್ಟೋ ಹಿಲ್ಸ್‌ನಲ್ಲಿ ನಿರ್ಮಿತವಾದ ಸ್ವಂತ ಕಟ್ಟಡದಲ್ಲಿ ರೋಟರಿ ಸಭಾಭವನ ಮೇ.28 ರ ಮಂಗಳವಾರ ಸಂಜೆ 6 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಕ್ಲಬ್ ಅಧ್ಯಕ್ಷ ರೋ ಪಿಎಚೆಫ್ ಅವಿಲ್ ಮಿನೇಜಸ್ ತಿಳಿಸಿದ್ದಾರೆ.
ಬಿ.ಸಿ.ರೋಡಿನ ಪ್ರೆಸ್‌ಕ್ಲಬ್ ನಲ್ಲಿ ಶುಕ್ರವಾರ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭಾಭವನವನ್ನು ರೋಟರಿ ಜಿಲ್ಲಾ ಗವರ್ನರ್ ರೋ ಪಿಎಚ್ ಎಫ್ ರೋಹಿನಾಥ್ ಪಾದೆ ಅವರು ಉದ್ಘಾಟಿಸಲಿದ್ದು, ಲೋರೆಟ್ಟೋ ಚರ್ಚ್ ಧರ್ಮಗುರು ವಂ.ಫಾ. ಎಲಿಯಾಸ್ ಡಿಸೋಜ ಅವರು ಆಶೀರ್ವಚನ ನೀಡಲಿರುವರು. ರೋ ಪಿಎಚ್ ಎಫ್ ಪ್ರಕಾಶ್ ಕಾರಂತ, ರೋ ಪಿಎಚ್ ಎಫ್ ಸಂಜೀವ ಪೂಜಾರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ವಿವರಿಸಿದರು.
ಕ್ಲಬ್‌ನ ಎಲ್ಲಾ ಸದಸ್ಯರ ಸಹಕಾರ, ಮಾತೃ ಸಂಸ್ಥೆ ರೋಟರಿ ಕ್ಲಬ್ ಬಂಟ್ವಾಳ ಮಾರ್ಗದರ್ಶನದಿಂದ ಸ್ವಂತ ನಿವೇಶನದೊಂದಿಗೆ ಸ್ವಂತ ಕಟ್ಟಡ ನಿರ್ಮಾಣದ ಪ್ರಗತಿಗೆ ಸಹಕಾರವಾಯಿತು ಎಂದ ಅವರು, ರೋಟರಿ ಕ್ಲಬ್‌ನ ಇತಿಹಾಸದಲ್ಲಿಯೇ ಕ್ಲಬ್ ಪ್ರಾರಂಭಗೊಂಡು ಒಂದೂವರೆ ವರ್ಷದಲ್ಲಿಯೇ ಸ್ವಂತ ನಿವೇಶನ ಹೊಂದಿ ರೋಟರಿ ಕ್ಲಬ್‌ಗೆ ಸ್ವಂತ ಕಟ್ಟಡದೊಂದಿಗೆ ಸುಸಜ್ಜಿತ ರೋಟರಿ ಸಭಾಭವನ ನಿರ್ಮಾಣ, ಮಡಂತ್ಯಾರ್‌ನಲ್ಲಿ ಹೊಸ ಕ್ಲಬ್ ಸ್ಥಾಪನೆ ಹಾಗೂ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರ್‍ಯಾಕ್ಟ್ ಕ್ಲಬ್ ಉದ್ಘಾಟನೆ ನಮ್ಮ ಸಾಧನೆ ಎಂದ ಅವರು, ನಮ್ಮ ಕ್ಲಬ್‌ನಲ್ಲಿ 6 ಜನ ಸದಸ್ಯರು ಪಿಎಚ್ ಎಫ್ ಸದಸ್ಯತನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.
ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್, ನಿಯೋಜಿತ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ಪ್ರಭಾಕರ ಪ್ರಭು, ನಾರಾಯಣ ಹೆಗ್ಡೆ, ಹರಿಪ್ರಸಾದ್ ಉಪಸ್ಥಿತರಿದ್ದರು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...