Thursday, July 10, 2025

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 2019 ನೇ ಸಾಲಿನಲ್ಲಿ ಸಾಧನೆಗೈದ ವಿಧ್ಯಾರ್ಥಿಗಳಿಗೆ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಬಂಟ್ವಾಳ ಟೌನ್  ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
 ಹತ್ತನೇ ತರಗತಿಯಲ್ಲಿನ ಸಾಧನೆಗಾಗಿ ಡಾ.ಅನುರಾಧಾ ದಿನೇಶ್ ಕಾಮತ್ ದಂಪತಿಗಳ ಸುಪುತ್ರಿ ಕು.ಅನುಪಮ ಕಾಮತ್, ಪ್ರತಿಮಾ ಸುಧಾಕರ್ ಸಾಲಿಯಾನ್ ದಂಪತಿಗಳ ಸುಪುತ್ರ ಸುಜನ್, ಮೈತ್ರಿ ಗಣೇಶ್ ಸಾಲಿಯಾನ್ ದಂಪತಿಗಳ  ಸುಪುತ್ರ ಗೌತಮ್ ಪೂಜಾರಿ, ಹೇಮಲತಾ ಸುರೇಶ್ ದಂಪತಿಗಳ ಸುಪುತ್ರಿ ಧಿಯಾ ಹಾಗೂ ಪಿಯುಸಿಯಲ್ಲಿ ಸಾಧನೆಗಾಗಿ  ಪ್ರೀಮಾ ದಯಾನಂದ ಶೆಟ್ಟಿ ದಂಪತಿಗಳ ಸುಪುತ್ರ ಅನುಷ್ ಶೆಟ್ಟಿ ಯವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ರೋಟರಿ ವಲಯ 4ರ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್, ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ  ರಂಗೋಲಿ, ಕಾರ್ಯದರ್ಶಿ ಜಯರಾಜ್ ಬಂಗೇರ ,ಕೋಶಾಧಿಕಾರಿ ಆಶಾಮಣಿ ರೈ ,  ಪದಾಧಿಕಾರಿಗಳಾದ  ಪದ್ಮನಾಭ ರೈ, ಸುರೇಶ್ ಸಾಲಿಯಾನ್, ನರೇಂದ್ರ ನಾಥ ಭಂಡಾರಿ ಉಪಸ್ತಿತರಿದ್ದರು.

More from the blog

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...