Thursday, February 13, 2025

ಸುವರ್ಣ ವರ್ಷಾಚರಣೆಯ ಬಂಟ್ವಾಳ ರೋಟರಿ ಕ್ಲಬ್ ಗೆ ಪ್ರಶಸ್ತಿ ಗಳ ಸರಮಾಲೆ

ಬಂಟ್ವಾಳ: ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿದ್ದ ಬಂಟ್ವಾಳ ರೋಟರಿ ಕ್ಲಬ್ 2018-19 ನೇ ಸಾಲಿನ ಸಾಧನೆಗಾಗಿ 22 ಪ್ರಶಸ್ತಿಗಳನ್ನು ಗೆದ್ದುಕೊಂಡು ತನ್ನ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ನಾಲ್ಕು ಕಂದಾಯ ಜಿಲ್ಲೆಗಳನ್ನು ಹೊಂದಿರುವ ರೋಟರಿ ಜಿಲ್ಲೆ 3181ರಲ್ಲಿ ವಿಶೇಷ ಸಾಧನೆ ಮಾಡಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದೆ. ಬಂಟ್ವಾಳ ರೋಟರಿ ಕ್ಲಬ್ ಇದೇ ಮೊದಲಬಾರಿಗೆ ಇಷ್ಟೊಂದು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದು ಸಮಗ್ರ ಪ್ರಶಸ್ತಿ ಬಾಚಿಕೊಳ್ಳುವ ಮೂಲಕ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ವರ್ಷಪೂರ್ತಿ ಸಮಾಜಮುಖಿ ಕಾರ್ಯಗಳೊಂದಿಗೆ ಜನಮನ್ನಣೆ ಪಡೆದುಕೊಂಡಿದ್ದ ರೋ. ಮಂಜುನಾಥ ಆಚಾರ್ಯ ನೇತೃತ್ವದ ಬಂಟ್ವಾಳ ರೋಟರಿಕ್ಲಬ್ ತನ್ನ ಸುವರ್ಣ ವರ್ಷಕ್ಕೆ ಪ್ರಶಸ್ತಿಗಳ ಗರಿಯನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಸದಸ್ಯರಲ್ಲಿ ಸುವರ್ಣ ವರ್ಷಾಚರಣೆಯ ಸಂಭ್ರಮವನ್ನೂ ಇಮ್ಮಡಿ ಗೊಳಿಸಿದೆ.


ಶನಿವಾರ ಸಂಜೆ ಮಂಗಳೂರಿನ ಕುಲಶೇಖರದ ಕೋರ್ಡೆಲ್ ಚರ್ಚ್ ಹಾಲ್ ನಲ್ಲಿ ನಡೆದ ಸಂತೃಪ್ತಿ- 2019 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ರೋಟರಿ ಜಿಲ್ಲಾ ಗವರ್ನರ್ ಅವರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು.
ಪ್ರಸ್ತುತ ವರ್ಷ ಬಂಟ್ವಾಳ ರೋಟರಿ ಕ್ಲಬ್ ಸುವರ್ಣ ವರ್ಷದ ಸಂಭ್ರಮದಲ್ಲಿದ್ದು, ಕ್ಲಬ್ ನ ಕ್ರಿಯಾಶೀಲ ಅಧ್ಯಕ್ಷ ರೋ. ಮಂಜುನಾಥ ಆಚಾರ್ಯ ಅವರಿಗೆ ಕ್ಲಬ್ ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿತ್ತು. ಕ್ಲಬ್ ನ ಹಿರಿಯ ನಾಯಕರು ಹಾಗೂ ಸದಸ್ಯರು ತನ್ನ ಮೇಲೆ ಇಟ್ಟಿರುವ ನಂಬಿಕೆಗೆ ಎಳ್ಳಷ್ಟು ಚ್ಯುತಿ ಬಾರದಂತೆ ಮಂಜುನಾಥ ಆಚಾರ್ಯ ಕ್ಲಬ್ ನ್ನು ಒಂದು ವರ್ಷದ ಅವಧಿಯಲ್ಲಿ ಸಾಧನೆಯ ಪಥದಲ್ಲಿ ಕೊಂಡೊಯ್ದ ರೀತಿ ಅಮೋಘವಾಗಿತ್ತು. ತನಗೆ ಸಿಕ್ಕಿದ್ದು ಅಧಿಕಾರವಲ್ಲ ಬದಲಾಗಿ ಅದೊಂದು ಅವಕಾಶ ಎಂದುಕೊಂಡು ತಾನು ಅಧ್ಯಕ್ಷನಾಗಿ ಆಯ್ಕೆಗೊಂಡ ದಿನದಿಂದಲೇ ಸಮಾಜಮುಖಿ ಕಾರ್ಯಗಳನ್ನು ನಡೆಸುವಲ್ಲಿ ಮುಂದಡಿ ಇಟ್ಟರು. ತಾಲೂಕಿನ ವಿದ್ಯಾರ್ಥಿಗಳಿಗಾಗಿ ಕಲಿಕೆಯ ಹೊಸ ಅವಕಾಶಗಳಿಗೆ ವೇದಿಕೆ ಒದಗಿಸಿದರು, ಸಮಾಜ ಗುರುತಿಸುವಂತಹ ಕಾರ್ಯಗಳನ್ನು ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು, ಕ್ಲಬ್ ನ ಸದಸ್ಯರೇ ಹೆಮ್ಮೆ ಪಡುವಂತೆ ಬಂಟ್ವಾಳ ರೋಟರಿ ಕ್ಲಬ್ ಅನ್ನು ಸಾಧನೆಯ ಉತ್ತುಂಗಕ್ಕೆ ಏರಿಸಿದರು. ಇದೆಲ್ಲದರ ಫಲವಾಗಿ ಅರ್ಹವಾಗಿಯೇ ಪ್ರಶಸ್ತಿಗಳು ಬಂಟ್ವಾಳ ರೋಟರಿ ಕ್ಲಬ್ ಅನ್ನು ಅರಸಿ ಬಂದಿದ್ದು ರೋಟರಿ ಇತಿಹಾಸಲ್ಲಿಯೇ ಮಂಜುನಾಥ ಆಚಾರ್ಯ ನೇತೃತ್ವದ ಬಂಟ್ವಾಳ ರೋಟರಿ ಕ್ಲಬ್ ತನ್ನ ಕೀರ್ತಿ ಪತಾಕೆಯನ್ನು ಹಾರಿಸಿ, ರೋಟರಿ ಸದಸ್ಯರ ಹಿರಿಮೆ ಹೆಚ್ಚಿಸಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...