Thursday, February 13, 2025

ಜ. ೨೭ರಂದು ಬಂಟ್ವಾಳದ ರೋಟರಿ ಕ್ಲಬ್‌ನ ಸುವರ್ಣ ಸಂಭ್ರಮಾಚರಣೆ

ಬಂಟ್ವಾಳ, ಜ. ೨೪: ೫೦ ವರ್ಷಗಳನ್ನು ಪೂರೈಸುತ್ತಿರುವ ಬಂಟ್ವಾಳದ ರೋಟರಿ ಕ್ಲಬ್‌ನ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ ಜ. ೨೭ರಂದು ಸಂಜೆ ೬ಗಂಟೆಗೆ ಅಡ್ಯಾರಿನ “ಅಡ್ಯಾರ್ ಗಾರ್ಡನ್”ನಲ್ಲಿ ನಡೆಯಲಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.
ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ರೋಟರಿ ಜಿಲ್ಲೆ ೩೧೮೧ರ ರಾಜ್ಯಪಾಲ ರೋಹಿನಾಥ ಪಿ. ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲೆ ೩೧೩೧ರ ಪೂರ್ವ ಜಿಲ್ಲಾ ಗವರ್ನರ್ ಮೋಹನ್ ಹಿರಾಚಂದ್ ಪಲೇಶಾ ಉಪಸ್ಥಿತರಿರುವರು, ಅತಿಥಿಗಳಾಗಿ ವಲಯ ೩೧೮೧ರ ಚುನಾಯಿತ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು, ನಿಯೋಜಿತ ಜಿಲ್ಲಾ ಗವರ್ನರ್ ರಂಗನಾಥ ಭಟ್ ಎಂ., ವಲಯ ೪ರ ಸಹಾಯಕ ಗವರ್ನರ್ ಪ್ರಕಾಶ್ ಕಾರಂತ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಗವರ್ನರ್ ಅವರ ಕನಸಿನಂತೆ ಅಂಗನವಾಡಿಗಳನ್ನು ಸಬಲೀಕರಣಗೊಳಿಸುವ ಆಶಾಸ್ಪೂರ್ತಿ ಯೋಜನೆಯಡಿ ತಾಲೂಕಿನ ೫ ಅಂಗನವಾಡಿ ಕೇಂದ್ರಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗಿದೆ. ೫೦ ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರು ಶುದ್ದೀಕರಣ ಯಂತ್ರ, ಮಿಕ್ಸರ್ ಗ್ರೈಂಡರ್, ಕುಕ್ಕರ್‌ಗಳನ್ನು ಒದಗಿಸಲಾಗಿದೆ. ಬಂಟ್ವಾಳ ತಾಲೂಕಿನ ಕೊಲ ಸರಕಾರಿ ಪ್ರೌಢಶಾಲೆಗೆ ೬ ಶೌಚಾಲಯವನ್ನು ನಿರ್ಮಿಸಿ ಕೊಡಲಾಗಿದೆ. ಮಾನೀಯ ವಿದ್ಯಾಸಂಸ್ಥೆಗೆ ೫ ತರಗತಿ ಕೊಠಡಿ, ಪೆರ್ನೆ ಹಾಹೂ ಪೊಳಲಿ ಶಾಲೆಗಳಿಗೆ ಕೊಠಡಿ ನಿರ್ಮಾಣ ಮಾಡಲು ಯೋಜನೆ ರೂಪಿಸಿಸಲಾಗಿದೆ. ಬಂಟ್ವಾಳದ ಬಡ್ಡಕಟ್ಟೆಯಲ್ಲಿ ಬಂಟ್ವಾಳ ಪುರಸಭೆ, ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ, ಜೇಸಿಐ ಬಂಟ್ವಾಳದ ಸಹಯೋಗದೊಂದಿಗೆ ಪ್ರಯಾಣಿಕರ ತಂಗುದಾಣವನ್ನು ಪುನರ್ ನವೀಕರಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸುವರ್ಣ ವರ್ಷಾಚರಣೆ ಸಮಿತಿ ಡಾ ರಮೇಶಾನಂದ ಸೋಮಾಯಜಿ, ಜಿಲ್ಲಾ ಲೆಫ್ಟಿನೆಂಟ್ ಸಂಜೀವ ಪೂಜಾರಿ, ನಿಕಟಪೂರ್ವ ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ, ನಿರ್ದೇಶಕ ಧನಂಜಯ ಬಾಳಿಗ ಹಾಜರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...