Friday, July 4, 2025

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ.
ಅಂದಾಜು ರೂ.40 ಸಾವಿರ ಮೌಲ್ಯದ ಎರಡು ಕರುಗಳು ಕಳವಾಗಿದ್ದು,
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಲ್ಲೂರು ನಿವಾಸಿ ಜಗದೀಶ್ ಕುಲಾಲ್ ಅವರು ದೂರು ನೀಡಿದ್ದಾರೆ.ಇವರು 12 ದನ ಕರುಗಳನ್ನು ಸಾಕಿದ್ದು ಅವರಿಗೆ ಸೇರಿದ ಜಾಗದಲ್ಲಿ ದನಗಳನ್ನು ಮೇಯಲು ಬಿಡುತ್ತಿದ್ದು, ಎಂದಿನಂತೆ ಜೂನ್ 28 ರಂದು ಬೆಳಿಗ್ಗೆ 8.30 ಗಂಟೆಗೆ ಹಟ್ಟಿಯಿಂದ ಹಸು ಹಾಗೂ ಕರುಗಳನ್ನು ಮೇಯಲು ಬಿಟ್ಟಿದ್ದರು. ಮೇಯಲು ಬಿಟ್ಟ ಹಸುಗಳ ಪೈಕಿ ಸುಮಾರು 2 ವರ್ಷ ಪ್ರಾಯದ 2 ಗಂಡು ಕರುಗಳು ಮನೆಗೆ ವಾಪಸು ಬಂದಿರುವುದಿಲ್ಲ.
ಕರುಗಳ ಬಗ್ಗೆ ಮನೆಯ ಹತ್ತಿರ ಸುತ್ತ ಮುತ್ತಲೂ ವಿಚಾರಿಸಿದಾಗ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಜಗದೀಶ್ ಅವರು ಹುಡುಕಾಡಿಕೊಂಡು ಹೋಗುವ ವೇಳೆ ಅಮ್ಮುಂಜೆ ಗ್ರಾಮದ, ಕಲಾಯಿ ಹೌಸ್ ಎಂಬಲ್ಲಿ ರಸ್ತೆ ಕಾಣುವಂತೆ ಸಿಸಿ ಕ್ಯಾಮರಾ ಅಳವಡಿಸಿದ್ದನ್ನು ನೋಡಿ ಪರಿಶೀಲಿಸಿದಾಗ ಜೂನ್ 29ರಂದು ಬೆಳಗ್ಗಿನ ಜಾವ ಸಮಯ ಸುಮಾರು 4.30 ಗಂಟೆಗೆ ಇವರಿಗೆ ಸೇರಿದ ಎರಡು ಗಂಡು ಕರುಗಳನ್ನು ಎರಡು ಜನ ವ್ಯಕ್ತಿಗಳು ರಿಡ್ಜ್ ಕಾರಿನಲ್ಲಿ ತುಂಬಿಸಿ ಹೋಗುವ ದೃಶ್ಯಾವಳಿಯು ಸೆರೆಯಾಗಿರುತ್ತದೆ.
ಮೇಯಲು ಹೋಗಿದ್ದ ಕಪ್ಪು ಮೈ ಬಣ್ಣದ ಗಂಡು ಕರು ಹಾಗೂ ಕೆಂಪು ಮೈಬಣ್ಣದ ಗಂಡು ಕರುಗಳನ್ನು ಯಾರೋ ಅಪರಿಚಿತರು ಕಲಾಯಿ ಎಂಬ ಸ್ಥಳದಿಂದ ಕಳವು ಮಾಡಿಕೊಂಡು ಹೋಗಿರುವುದು ಕಂಡು ಬಂದಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಅ ಕ್ರ 96/2025 ಕಲಂ: 303(2)BNS ಯಂತೆ ಪ್ರಕರಣ ದಾಖಲಾಗಿರುತ್ತದೆ.

More from the blog

B. C. ROAD : ಜು.19ರಿಂದ 27ರವರೆಗೆ ಭಾರತ ದರ್ಶನ ಯಕ್ಷಗಾನ ತಾಳಮದ್ದಳೆ ನವಾಹ..

ಬಂಟ್ವಾಳ : ಬಿ.ಸಿ.ರೋಡಿನ ತುಳು ಶಿವಳ್ಳಿ ಸಭಾಭವನದಲ್ಲಿ ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ಅವರಿಂದ ತುಳು ಶಿವಳ್ಳಿ ಸೇವಾ ಟ್ರಸ್ಟ್ ಬಂಟ್ವಾಳ ತಾಲೂಕು ಸಹಭಾಗಿತ್ವದಲ್ಲಿ ಭಾರತ ದರ್ಶನ ಎಂಬ ಯಕ್ಷಗಾನ ತಾಳಮದ್ದಳೆ...

ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ: ಬೇಬಿ ಕುಂದರ್….

ಬಂಟ್ವಾಳ : ಬ್ರೋಕರ್ ಗಳ ಮಾತಿಗೆ ತಲೆಕೆಡಿಸಿಕೊಳ್ಳುವುದಿಲ್ಲ, ಜನರ ಸಮಸ್ಯೆ ಪರಿಹಾರ ಮಾಡುತ್ತೇನೆ, ಭ್ರಷ್ಟಾಚಾರ ರಹಿತ ಕೆಲಸಕ್ಕೆ ಒತ್ತು ನೀಡುವುದಾಗಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ‌ಕುಂದರ್ ತಿಳಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದ...

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...