ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 37ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಎ.25ರಂದು (ನಾಳೆ) ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಇರುವ ಕಾರಣ ಮುಂದೂಡಲಾಗಿದೆ ಎಂದು ಕ್ಲಬ್ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

ಹಾಗೆಯೇ ಎಪ್ರಿಲ್ 25ರಂದು (ನಾಳೆ) ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಸರಕಾರದ ಕೋವಿಡ್ ನಿಯಮಾನುಸಾರ ಸೀಮಿತ ಜನರ ಸೇರುವಿಕೆಯಲ್ಲಿ ನಡೆಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

