Monday, February 10, 2025

ತಾ.ಪಂ: ಅಧಿಕಾರಿಗಳ ಮಾಸಿಕ ಸಭೆ

ಬಂಟ್ವಾಳ: ತಾ.ಪಂ.ಮಾಸಿಕ ಅಧಿಕಾರಿಗಳ ಸಭೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅದ್ಯಕ್ಷತೆಯಲ್ಲಿ ಗುರುವಾರ ನಡೆಯಿತು.
ಮಳೆಗಾಲ ಆರಂಭವಾಗುವುದರಿಂದ ತಾಲೂಕು ಮಟ್ಟದ ಅಧಿಕಾರಿಗಳು ಜನರಿಗೆ ಯಾವುದೇ ಸಮಸ್ಯೆ ಗಳು ಉಂಟಾದ ರೆ ಶೀಘ್ರವಾಗಿ ಸ್ಪಂದಿಸುವ ಮನಸ್ಸು ಮಾಡಿ ಎಂದು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧಿಕಾರಿಗಳಿಗೆ ತಿಳಿಸಿದರು.
ತಾ.ಪಂ.ಉಪಾಧ್ಯಕ್ಷ ಮಾತನಾಡಿ  ತಾ.ಮಟ್ಟದ ಅಧಿಕಾರಿಗಳು ಮಾಸಿಕ ಸಭೆಯಲ್ಲಿ ಭಾಗವಹಿಸಿ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಕೆಲಸ ಮಾಡುವಂತೆ ತಿಳಿಸಿದರು.
12 ರಸ್ತೆ , 28 ಶಾಲಾ ಸಂಪರ್ಕ ಸೇತು ಯೋಜನೆ ಹಾಗೂ 6 ಪಿ.ಯು.ಕಾಲೇಜು ಕಟ್ಟಡಗಳು ಮಂಜೂರಾತಿ ಪಡೆದು ಟೆಂಡರ್ ಹಂತದಲ್ಲಿದೆ.
ಮಂಗಳೂರು ಮುಡಿಪುವಿನಲ್ಲಿರುವ ಕೇಂದ್ರ ಕಾರಾಗ್ರಹ ಕಾಮಗಾರಿ ಟೆಂಡರ್ ಹಂತದಲ್ಲಿ ದೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು.
ಮಳೆಗಾಲ ಆರಂಭದಲ್ಲಿ ರಸ್ತೆ ಮತ್ತು  ಸುರಕ್ಷತಾ ದೃಷ್ಟಿಯಿಂದ ಚರಂಡಿ ಹಾಗೂ ಇನ್ನೂ  ಬೇಕಾದ ವ್ಯವಸ್ಥೆ ಗಳನ್ನು ಮಾಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗೆ ಇ.ಒ.ಸೂಚನೆ ನೀಡಿದರು.
ಸರ್ವರ್ ಸಮಸ್ಯೆ ಯಿಂದ ಅಹಾರ ಶಾಖೆಯ ಕೆಲಸಕ್ಕೆ ಸ್ವಲ್ಪ ಮಟ್ಟಿಗೆ ತೊಂದರೆ ಯಾಗುತ್ತಿದೆ ಎಂದು ಅಹಾರ ಶಾಖಾ ಇಲಾಖೆಯ ಅಧಿಕಾರಿ ಸಭೆಯ ಗಮನಕ್ಕೆ ತಂದರು.
ಅಂಗನವಾಡಿ ಶಾಲಾ ಕಟ್ಟಡಗಳಿಗೆ ಹೊಸ ರೂಪು ನೀಡಿ‌ಮಕ್ಕಳ ಸಂಖ್ಯೆ ಹೆಚ್ಚಳ ವಾಗುವಂತೆ ಸಿ.ಡಿ.ಪಿ.ಒ.ಇಲಾಖಾ ಅಧಿಕಾರಿಗಳು ಯೋಜನೆ ರೂಪಿಸಿ ಎಂದು ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ ತಿಳಿಸಿದರು.
ಅಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದಾಗಿ ಅಂಗನವಾಡಿಗಳನ್ನು ಉಳಿಸಿಕೊಳ್ಳಲು ಸರಕಾರಿ ಶಾಲೆಗಳ ಜೊತೆಯಲ್ಲಿ ಸೇರಿಕೊಂಡು ಮುನ್ನಡೆ ಯುವುದು ಉತ್ತಮ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ತಿಳಿಸಿದರು.
ಅಂಗನವಾಡಿಯ ಅನುದಾನಗಳನ್ನು ಯಥಾವತ್ತಾಗಿ ಬಳಸಿಕೊಂಡು , ಅಂಗ್ಲ ಮಾದ್ಯಮ ಶಿಕ್ಷಣ ವನ್ನು ಸರಕಾರಿ ಶಾಲೆಯ ಮುಖಾಂತರ ನೀಡುವ ಯೋಚನೆ ಮಾಡಬೇಕಾಗುತ್ತದೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಈ ಬಾರಿ ಸರಕಾರ ಸರ್ಕಾರಿ ಶಾಲೆಗಳಲ್ಲಿ ಅಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅವಕಾಶ ನೀಡಿದ್ದರಿಂದ ಈ ಯೋಚನೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ದುರಸ್ತಿ ಯಲ್ಲಿರುವ ಅಂಗನವಾಡಿ ಗಳನ್ನು ಪಟ್ಟಿ ಮಾಡಿ ಅಂತಹ ಅಂಗನವಾಡಿ ಕೇಂದ್ರಗಳ ರಿಪೇರಿ ಮಾಡುವ ಯೋಜನೆ ಕೈಬಿಟ್ಟು ನೂತನ ಕಟ್ಟಡ ನಿರ್ಮಾಣ ಮಾಡುವ ಯೋಚನೆ ಮಾಡುವ ಎಂದು ಇ.ಒ.ರಾಜಣ್ಣ ತಿಳಿಸಿದರು.
ಪ್ರತಿ ವರ್ಷ ಹಂಚಿನ ಮಾಡು ಇರುವ ಅಂಗನವಾಡಿಗಳ ದುರಸ್ತಿ ಕಾರ್ಯಕ್ಕೆ ಹಣ ಖರ್ಚಾಗುತ್ತದೆ, ಅ ನಿಟ್ಟಿನಲ್ಲಿ ಅನಾವಶ್ಯಕ ಪ್ರತಿ ವರ್ಷ ರಿಪೇರಿ ಗೆ ಖರ್ಚಾಗುವ ಹಣವನ್ನು ಕಡಿಮೆ ಮಾಡುವ ಉದ್ದೇಶದಿಂದ ನೂತನ ಕಟ್ಟಡ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.
ಗ್ರಾ.ಪಂ.ನಿಂದ ಯಾವುದೇ ರೀತಿಯಲ್ಲಿ ದೂರು ಬಾರದ ರೀತಿಯಲ್ಲಿ ಮೆಸ್ಕಾಂ ಕಾರ್ಯನಿರ್ವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಇ.ಒ.ರಾಜಣ್ಣ ತಿಳಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...