Wednesday, January 28, 2026

ವಿಟ್ಲ: ಮಹಿಳಾ ಕಾಲೇಜು ಶಿಕ್ಷಕ-ರಕ್ಷಕ ಸಭೆ

ವಿಟ್ಲ: ದೇವರಿಗೆ ಹೆದರಿ ಜೀವನ ನಡೆಸುವ ವ್ಯಕ್ತಿಗಳಿಗೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಹೆತ್ತವರನ್ನು ನೋಯಿಸುವವರು ಎಂದಿಗೂ ಜೀವನದಲ್ಲಿ ಮುಂದೆ ಸಾಧ್ಯವಿಲ್ಲ. ಅದಕ್ಕೆ ಯಾವುದೇ ಪರಿಹಾರವಿಲ್ಲ. ಮಹಿಳೆಯರು ಧಾರ್ಮಿಕ ಶಿಕ್ಷಣ ಪಡೆದಾಗ ಊರಿಗೆ ಹಾಗೂ ಕುಟುಂಬಕ್ಕೆ ಸಹಕಾರಿಯಾಗಲಿದೆ ಎಂದು ಪುತ್ತೂರು ಕಲ್ಲೇಗ ಜುಮಾ ಮಸೀದಿ ಖತೀಬು ಅಬೂಬಕ್ಕರ್ ಸಿದ್ದಿಕ್ ಜಲಾಲೀ ಹೇಳಿದರು.
ಅವರು ವಿಟ್ಲದ ಮೇಗಿನಪೇಟೆ ಅಲ್ಖೈರ್ ಶರೀಯತ್ ಮಹಿಳಾ ಕಾಲೇಜಿನಲ್ಲಿ ನಡೆದ ಶಿಕ್ಷಕ-ರಕ್ಷಕ ಸಭೆಯಲ್ಲಿ ಉಪನ್ಯಾಸ ನೀಡಿದರು.
ತಮ್ಮ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುವುದರ ಜತೆಗೆ ಇಸ್ಲಾಮಿನ ಧಾರ್ಮಿಕ ಚೌಕಟ್ಟಿನಲ್ಲಿ ಬದುಕು ರೂಪಿಸುವಂತೆ ಮಾಡುವ ಜವಾಬ್ದಾರಿ ಹೆತ್ತವರ ಮೇಲಿದೆ. ಶರೀಯತ್ ಕಾಲೇಜುಗಳ ಮೂಲಕ ಮಹಿಳೆಯರು ಇಸ್ಲಾಮಿನ ಆಚಾರ-ವಿಚಾರಗಳು ಕಲಿಯಲು ಸಾಧ್ಯವಿದೆ. ಹೆತ್ತವರು ಧಾರ್ಮಿಕ ಚೌಕಟ್ಟಿನಲ್ಲಿ ನಡೆದಾಗ ಮಕ್ಕಳು ಕೂಡಾ ಅದನ್ನೇ ಅನುಸರಿಸುತ್ತಾರೆ. ಹೆತ್ತವರು ಅವುಗಳಲ್ಲಿ ಮಾಡದಿದ್ದರೆ ಮಕ್ಕಳಿಗೂ ಅಪಾಯವಿದೆ. ಲೌಕಿಕ ಶಿಕ್ಷಣ ಪಡೆದರೆ ಮಾತ್ರ ಜೀವನ ಸಾರ್ಥಕವಾಗುವುದಿಲ್ಲ. ಧಾರ್ಮಿಕ ಶಿಕ್ಷಣ ಅತ್ಯಾವಶ್ಯಕವಾಗಿದೆ. ಪ್ರತಿಯೊಬ್ಬರು ಅವುಗಳನ್ನು ತಿಳಿದುಕೊಂಡು ತಮ್ಮ ಮಕ್ಕಳು ಮುಂದೆ ಬರಲು ಸಾಧ್ಯವಿದೆ ಎಂದರು.
ಕಾಲೇಜು ಶಿಕ್ಷಕ ಅಬ್ಬಾಸ್ ದಾರಿಮಿ ದುವಾಃ ನೆರವೇರಿಸಿದರು. ಕಾಲೇಜು ಆಡಳಿತ ಸಮಿತಿ ಅಧ್ಯಕ್ಷ ಇಬ್ರಾಹಿಂ ಏರ್ ಸೌಂಡ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಆಡಳಿತ ಸಮಿತಿ ಕಾರ್ಯದರ್ಶಿ ಸಫ್ವಾನ್ ಸಫ್ವಾನ್ ಮಹಮ್ಮದ್, ಸದಸ್ಯರಾದ ಇಬ್ರಾಹಿಂ ಹಾಜಿ ಪೊನ್ನೋಟ್ಟು, ಅಬ್ದುಲ್ ಹಮೀದ್ ಕುದ್ದುಪದವು, ಅಶ್ರಫ್ ಕಬಕ, ಮಹಮೂದ್ ಹಾಜಿ ಮೇಗಿನಪೇಟೆ, ಮಹಮ್ಮದ್ ಅಲಿ ವಿಟ್ಲ ಭಾಗವಹಿಸಿದ್ದರು.
ಕಾಲೇಜು ವ್ಯವಸ್ಥಾಪಕ ಹಕೀಂ ಅರ್ಶದಿ ಸ್ವಾಗತಿಸಿ, ನಿರೂಪಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...