Friday, January 30, 2026

ಹೆಣ್ಣು ಗಂಡು ಎಂಬ ತಾರತಮ್ಯ ಸಲ್ಲ: ಯುವವಾಹಿನಿ ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸಂಧ್ಯಾ ಕುಳಾಯಿ ಸಲಹೆ , ಯುವವಾಹಿನಿ ಬಂಟ್ವಾಳ ತಾಲೂಕು ಘಟಕದಿಂದ ಸಖೀ ಸಂವಾದ

ಬಂಟ್ವಾಳ: ಗಂಡು ಹೆಣ್ಣು ಎನ್ನುವ ತಾರತಮ್ಯವೆಸಗದೆ, ಮಕ್ಕಳನ್ನು ಸಮಾನಾಗಿ ಬೆಳೆಸಿ, ಸಂಸ್ಕಾರ ನೀಡುವುದರೊಂದಿಗೆ ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸಂಧ್ಯಾ ಕುಳಾಯಿ ಹೇಳಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕು ಬಿಲ್ಲವ ಸೇವಾ ಸಂಘದ ಸಹಯೋಗದೊಂದಿಗೆ ಬಿ.ಸಿ.ರೋಡ್ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಸಖೀ ಸಂವಾದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.ಯುವವಾಹಿನಿ ಅಧ್ಯಕ್ಷ ಸುಂದರ ಬೋಳಂಗಡಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ನಯನಾ ಜಯ, ಮಹಿಳಾ ಸಂಘಟನಾ ನಿರ್ದೇಶಕರಾದ ಸ್ನೇಹಾ, ರಚನಾ ಮೊದಲಾದವರು ಉಪಸ್ಥಿತರಿದ್ದರು. ಆರೋಗ್ಯದ ಬಗ್ಗೆ ಡಾ.ವೀಣಾ ತೋಳ್ಪಾಡಿ, ನ್ಯಾಯದ ಬಗ್ಗೆ ವಕೀಲೆ ರೇಖಾ ಶೆಟ್ಟಿ, ಮನಸ್ಸಿನ ಬಗ್ಗೆ ಮನೋರೋಗ ತಜ್ಞೆ ಡಾ.ಅರುಣಾ ಯಡಿಯಾಳ್, ಸಮಾಜದ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಅತ್ರಾಡಿ ಅಮೃತಾ ಶೆಟ್ಟಿ ಸಂವಾದ ನಡೆಸಿದರು. ಬೆಸೆಂಟ್ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಸ್ಮಿತಾ ಶೆಣೈ ಸಮನ್ವಯಕರಾಗಿದ್ದರು. ಪ್ರಜ್ನಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

ಬಿ.ಸಿ.ರೋಡ್ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಸಖಿ ಸಂವಾದ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು. ಯುವವಾಹಿನಿ ಅಧ್ಯಕ್ಷ ಸುಂದರ ಬೋಳಂಗಡಿ, ಯುವವಾಹಿನಿ ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸಂಧ್ಯಾ ಕುಳಾಯಿ, ತಾಲೂಕು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ನಯನಾ ಜಯ, ಮಹಿಳಾ ಸಂಘಟನಾ ನಿರ್ದೇಶಕರಾದ ಸ್ನೇಹಾ, ರಚನಾ ಮೊದಲಾದವರು ಉಪಸ್ಥಿತಿರಿದ್ದರು.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...