Sunday, January 25, 2026

ಇತಿಹಾಸ ಪ್ರಸಿದ್ಧ ಸುಳ್ಳಮಲೆ ಬೆಟ್ಟದಲ್ಲಿರುವ ಕೆರೆಗಳ ಅಭಿವೃದ್ಧಿಯ ಸಲುವಾಗಿ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಸುಳ್ಳಮಲೆ ಬೆಟ್ಟದಲ್ಲಿರುವ ಕೆರೆಗಳ ಅಭಿವೃದ್ಧಿಯ ಸಲುವಾಗಿ ಊರಿನ ಪ್ರಮುಖರ, ಜನಪ್ರತಿನಿಧಿಗಳ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಗ್ರಾಮಸ್ಥರ ಸಭೆಯನ್ನು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ನಡೆಸಲಾಯಿತು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು, ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿಯವರ ಉಪಸ್ಥಿತಿಯಲ್ಲಿ ಜರಗಿದ ಈ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರು ಸುಳ್ಳಮಲೆ ಬೆಟ್ಟದಲ್ಲಿರುವ ಕೆರೆಗಳ ಹೂಳೆತ್ತುವ ಕೆಲಸಕಾರ್ಯಗಳನ್ನು ನಡೆಸುವರೇ ರಾಜ್ಯ ಸರಕಾರದ ಅರಣ್ಯ ಇಲಾಖೆಯಿಂದ ಸುತ್ತೋಲೆ ಮಾಣಿ ಗ್ರಾಮ ಪಂಚಾಯತ್ ಗೆ ಬಂದಿದ್ದು, ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಣಯಿಸಲಾಗಿದೆ. ಇಲಾಖೆಯ ನಿಯಮವನ್ನು ಅನುಸರಿಸುವ ಜೊತೆಗೆ ಊರಿನವರೆಲ್ಲರ ಸಹಕಾರದಿಂದ ಈ ಕೆಲಸವನ್ನು ನಿರ್ವಹಿಸಲು, ಎಲ್ಲರೂ ಸಹಕರಿಸಬೇಕು ಎಂದು ವಿನಂತಿಸಿಕೊಂಡರು.

ಸುಳ್ಳಮಲೆ ಬೆಟ್ಟಕ್ಕೆ ಧಾರ್ಮಿಕ ಪರಂಪರೆಯೊಂದಿಗೆ ಪೌರಾಣಿಕವಾದ ಹಿನ್ನೆಲೆಯಿದೆ. ಕೆರೆಗಳ ಅಭಿವೃದ್ಧಿಯ ದೃಷ್ಟಿಯಿಂದ ಧಾರ್ಮಿಕ ಚಿಂತನೆ ಆಗಬೇಕು ಮತ್ತು ಗ್ರಾಮ ದೈವಗಳ ಅಭಯದ ಪ್ರಕಾರ ಈ ಕಾರ್ಯಕ್ಕೆ ಮುಂದಿನ ಹೆಜ್ಜೆಯನ್ನು ಇಡಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಮೂಡಿ ಬಂತು.

ಊರಿನ ಪ್ರಮುಖರಾದ ತಿರುಮಲ ಕುಮಾರ್ ಮಜಿ ಮನೆ, ಜಗನ್ನಾಥ ಚೌಟ ಬದಿಗುಡ್ಡೆ, ಸಂದೀಪ್ ಶೆಟ್ಟಿ ಅರೆಬೆಟ್ಟು, ಸುಧೀರ್ ಕುಮಾರ್ ಶೆಟ್ಟಿ ಬನ್ನೂರು ಗುತ್ತು, ಮಹಾಬಲ ಶೆಟ್ಟಿ ವಾರಾಟ, ರಾಜೀವ ಶೆಟ್ಟಿ ವಾರಾಟ, ಸೀತಾರಾಮ ಶೆಟ್ಟಿ ಶಂಭುಗ, ತಮ್ಮಣ್ಣ ಶೆಟ್ಟಿ ಶಂಭುಗ, ಜನಾರ್ದನ ಪೂಜಾರಿ ಬಾಯಿಲ, ಗಣೇಶ್ ರೈ ಸಾಗು, ಜಗದೀಶ್ ಜೈನ್ ಮಾಣಿ, ಹರಿಯಪ್ಪ ಮೂಲ್ಯ ನೆಲ್ಲಿ, ಜತ್ತಪ್ಪ ಮೂಲ್ಯ ಪಲ್ಲತ್ತಿಲ, ಸಂಜೀವ ಮೂಲ್ಯ ಬಂಗುಲೆ, ಗೋಪಾಲ ಮೂಲ್ಯ ನೆಲ್ಲಿ, ಲೋಕೇಶ್ ಪೂಜಾರಿ ಪಲ್ಲತ್ತಿಲ, ಸುಧಾಕರ ಶೆಟ್ಟಿ ಶಂಭುಗ, ಭರತ್ ಶೆಟ್ಟಿ ಹಳಿರ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ನಾರಾಯಣ ಶೆಟ್ಟಿ ತೋಟ, ಇಬ್ರಾಹಿಮ್.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸುಜಾತಾ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...