Friday, January 30, 2026

ಅಂಗನವಾಡಿ ಕಾರ್ಯಕರ್ತರ ವಿಶೀಷ ಸಭೆ

ಮಾಣಿ: ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಅಂಗನವಾಡಿ ಕಾರ್ಯಕರ್ತರ ವಿಶೀಷ ಸಭೆ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಣಿ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿ ಕೋವಿಡ್ ಮುಂಜಾಗೃತೆ ಮತ್ತು ಲಸಿಕೆ ವಿತರಣೆಯ ವಿಚಾರದಲ್ಲಿ ಬಹಳಷ್ಟು ಮುತುವರ್ಜಿಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಲಸಿಕೆ ಪಡೆದವರ ಮತ್ತು ಪಡೆಯದವರ ಸಮೀಕ್ಷೆಯನ್ನು ಮಾಡುವ ಬಗ್ಗೆ ಚಿಂತಿಸುತ್ತಿದೆ. ಇದಕ್ಕೆ ಅಂಗನವಾಡಿ ಕಾರ್ಯಕರ್ತರು ನಮ್ಮ ಜೊತೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿಯವರು ಉಪಸ್ಥಿತರಿದ್ದರು.

ನಮ್ಮ ಗ್ರಾಮದಲ್ಲಿ 100% ಕೋವಿಡ್ ಲಸಿಕೆಯ ಗುರಿ ನಮ್ಮದು

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...