Saturday, June 28, 2025

ಪಾಣೆಮಂಗಳೂರು: ಯುವಮೋರ್ಚಾ ಕಾರ್ಯಕಾರಿಣಿ ಸಭೆ

ಬಂಟ್ವಾಳ: ಹುಟ್ಟಿನಿಂದ ಸಾವಿನವರೆಗೆ ಮತ್ತು ಸಾವಿನ ನಂತರ ಅವಲಂಬಿತರಿಗೆ ಜೀವನ ಭದ್ರತೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿಯನ್ನು ನೀಡಿ ಭಾರತವನ್ನು ಪರಮವೈಭವದ ಹಾದಿಯಲ್ಲಿ ತಂದು ನಿಲ್ಲಿಸಿದ ಮೋದಿ ನೇತೃತ್ವದ ಸ್ಥಿರ ಸರಕಾರ ಮತ್ತೊಮ್ಮೆ ಗೆಲ್ಲಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಯುವಮೋರ್ಚಾ ಕಾರ್ಯಕರ್ತರು ಚುನಾವಣಾ ಕಣಕ್ಕೆ ದುಮುಕಬೇಕೆಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್‌ರವರು ಹೇಳಿದರು.


ಪಾಣೆಮಂಗಳೂರು ಗ್ರಾಮದ ಕರುಣಾಕರ ಮೆಲ್ಕಾರ್ ಇವರ ಮನೆಯಲ್ಲಿ ನಡೆದ ಬಂಟ್ವಾಳ ಯುವಮೋರ್ಚಾ ಕಾರ್ಯಕಾರಿಣಿ ಉದ್ಫಾಟಸಿ ಅವರು ಮಾತನಾಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿಯವರು ಮಾತನಾಡಿ ಜಗತ್ತಿನಲ್ಲೆ ಗೌರವಗಳಿಂದ ಮೊದಿ ಸರಕಾರ ಮತ್ತೊಮ್ಮೆ ಆಡಳಿತ ನಡೆಸುವಂತಾಗಬೇಕಾದರೆ ಯುವಶಕ್ತಿ ಜಾಗೃತವಾಗಬೇಕು. ಸುಳ್ಳು ಮಾತಾಡುವ ಭ್ರಷ್ಟಾಚಾರ ಮಾಡುವ ವಿರೋಧ ಪಕ್ಷಗಳ ನಿಜಬಣ್ಣವನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಮೋರ್ಚಾ ಕಾರ್ಯಕರ್ತರು ಮಾಡಬೇಕೆಂದರು ಚುನಾವಣೆಯ ಸಮಯ ರಾಷ್ಟ್ರೀಯ ಮತ್ತು ರಾಜ್ಯ ಯುವಮೋರ್ಚಾದಿಂದ ನೀಡಿರುವ ಕೆಲಸಗಳನ್ನು ಯಶಸ್ವಿಯಾಗಿ ಮಾಡುವುದಲ್ಲದೆ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ವಿರೋದ ಪಕ್ಷಗಳು ಎಣಿಸಲಾರದಂತ ಗೆಲುವಿನ ಅಂತರ ಹೆಚ್ಚಿಸುವಲ್ಲಿ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡುವಂತೆ ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಹರೀಶ್ ಮೂಡಶೆಡ್ಡೆ ತಿಳಿಸಿದರು.
ಸಾಮಾಜಿಕ ಜಾಲತಾಣಗಳನ್ನು ಬಿಜೆಪಿಯ ಗೆಲುವಿಗೆ ಪೂರಕವಾಗಿ ಬಳಸಿಕೊಳ್ಳುವ ಬಗ್ಗೆ ಕಿವಿಮಾತು ಹೇಳಿದರು. ಇನ್ನೊರ್ವ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ ಕಾರ್ಯಕರ್ತರು ನಿರಂತರ ಚಟುವಟಿಕೆಯಲ್ಲಿರಬೇಕು ಎಂದರು.
ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ ಉಪಸ್ಥಿತರಿದ್ದರು. ಬಂಟ್ವಾಳ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸಂತೋಷ್ ರಾಯಿಬೆಟ್ಟು ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಕೋಟ್ಯಾನ್ ವಂದಿಸಿದರು. ಇನ್ನೊರ್ವ ಕಾರ್ಯದರ್ಶಿ ಲೋಹಿತ್ ಕೊಳ್ನಾಡು ಕಾರ್ಯಕ್ರಮ ನಿರ್ವಹಿಸಿದರು.

More from the blog

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...