Friday, July 11, 2025

ಪೊಳಲಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುಪುರ ಕೈಕಂಬದ ಭಕ್ತಾದಿಗಳ ಸಭೆ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುಪುರ ಕೈಕಂಬದ ಭಕ್ತಾದಿಗಳ ಸಭೆ ಕೈಕಂಬದ ಬೆನಕಧಾಮದಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಭೆಯಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಮಾತನಾಡಿ ಸುಮಾರು ಲಕ್ಷಾಂತರ ಭಕ್ತಾದಿಗಳು ಬಾಗಿಯಾಗಲಿದ್ದು ಬ್ರಹ್ಮಕಲಶೋತ್ಸವದ ಯಶಸ್ಸಿಗೆ ನಾವೆಲ್ಲರೂ ಶ್ರಮಪಡಬೇಕಿದೆ ಎಂದರು. ಗುರುಪುರ ಕೈಕಂಬದಿಂದ ಶ್ರೀ ಕ್ಷೇತ್ರಕ್ಕೆ ಹೊರೆಕಾಣಿಕೆ ಮಾರ್ಚ್ 4ರಂದು ಹೊರಡಲಿದ್ದು ಈ ಕಾರ್‍ಯಕ್ರಮವನ್ನು ಯಶಸ್ವಿಗೊಳಿಸುವಚಿತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮೂಳೂರು ಮುಂಡಿತ್ತಾಯ ದೈವಸ್ಥಾನದ ಮೋಕ್ತೆಸರರಾದ ಪ್ರಮೋದ್ ಕುಮಾರ್ ರೈ, ವಿನೋದ್ ಮಾಡ, ತಾ.ಪಂ ಸದಸ್ಯರಾದ ಸಚಿನ್ ಅಡಪ, ರಾಜೀವ್ ರೈ, ಶ್ರೀಧರ್ ರಾವ್, ಗಣೇಶ್ ಆಚಾರ್ಯ, ವಿ.ಸಿ ಶೇಖರ್, ಹಿರಿಯರಾದ ಹರಿರಾವ್, ಮತ್ತು ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು, ಮಹೇಶ್ ಶೆಟ್ಟಿ ಕಾರ್‍ಯಕ್ರಮ ನಿರ್ವಹಿಸಿ ವಂದಿಸಿದರು.

More from the blog

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...