ವಿಟ್ಲ: ವಿಟ್ಲ ಪ.ಪಂ.ನ 1ನೇ ವಾರ್ಡ್ ಚಂದಳಿಕೆ ಸಮೀಪದ ದೇವಸ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮತ್ತು ವನಮಹೋತ್ಸವ ನಡೆಸಲಾಯಿತು. ವಿಟ್ಲ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಸದಸ್ಯರಾದ ಲೋಕನಾಥ್ ಶೆಟ್ಟಿ ಕೊಲ್ಯ, ಬಿಜೆಪಿ ವಾರ್ಡ್ ಅಧ್ಯಕ್ಷ ಕೃಷ್ಣ ಮುದೂರು, ಕಾರ್ಯದರ್ಶಿ, ಸುರೇಶ್ ದೇವಸ್ಯ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.














