ಮಕ್ಕಳ ಕಲಾ ಲೋಕ” ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ನಿರ್ವಹಿಸುವ ಬಂಟ್ವಾಳ ತಾಲೂಕು 16ನೆಯ ಮಕ್ಕಳ ಸಾಹಿತ್ಯ ಸಮ್ಮೇಳನವು ಓಜಾಲದಲ್ಲಿ ನಡೆಯಲಿದೆ.


ಓಜಾಲ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಸಮ್ಮೇಳನವನ್ನು ದಿನಾಂಕ 13.12.2022ರಂದು ನಡೆಸಲಾಗುವುದೆಂದು ಸಮ್ಮೇಳನದ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಚಿದಾನಂದ ಪೆಲತ್ತಿಂಜರು ಘೋಷಿಸಿದರು. ಸಮ್ಮೇಳನದಲ್ಲಿ ತಾಲೂಕಿನ 18 ವಯೋಮಾನದ ಒಳಗಿನ ಮಕ್ಕಳು ಭಾಗವಹಿಸ ಬಹುದೆಂದು ಅವರು ಆಮಂತ್ರಿಸಿರುವರು.
18 ವರ್ಷ ವಯೋಮಾನದ ವಿದ್ಯಾರ್ಥಿಗಳಿರುವ ತಾಲೂಕಿನೊಳಗಿರುವ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾ ಸಂಸ್ಥೆಗಳಲ್ಲಿ ಐದು ವರ್ಷಗಳಿಂದೀಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ವಿದ್ಯಾ ಸಂಸ್ಥೆಗೆ, ಸಮ್ಮೇಳನದಂದು “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಹಾಗೆಯೇ ಕೆಲವು ಸಂಸ್ಥೆಗಳಲ್ಲಾದರೂ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಮಕ್ಕಳಿಗೆ ಸಹಕರಿಸಿದ ಸಾಧಕರ ವಿವರಗಳನ್ನು ಬರೆದು ಕಳುಹಿಸಿರಿ. ಆಯ್ದ ಸಾಧಕರಿಗೆ, “ಬಾಲಬಂಧು” ಪ್ರಶಸ್ತಿಯನ್ನು ನೀಡಿ ಸಮ್ಮಳನದಂದು ಗೌರವಿಸಲಾಗುವುದು. ಎರಡೂ ವಿವರಗಳನ್ನು 2022 ಅಕ್ಟೋಬರ್ ಒಳಗಾಗಿ ಕೆಳಗಿನ ವಿಳಾಸಕ್ಕೆ ತಲುಪಿಸ ಬೇಕು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ವಿಳಾಸ- ಅಧ್ಯಕ್ಷರು, ‘ಮಕ್ಕಳ ಕಲಾ ಲೋಕ’ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು, “ಈಸ್ಲೆರಿ”, ಕರವೀರ- ಅಂಚೆ ನೀರ್ಕಜೆ, ಪಿನ್: 574243 ಮೊಬೈಲ್ 9448626093












