Friday, January 30, 2026

*ಸಜೀಪನಡು ಗ್ರಾಮದ ಸಮಸ್ಯೆಗಳನ್ನು ಪರಿಶೀಲಿಸಿದ ಶಾಸಕ ಖಾದರ್*

ಮಂಗಳೂರು: ಮಂಗಳೂರು ಶಾಸಕರಾದ ಯುಟಿ ಖಾದರ್ ಅವರು ಸಜಿಪನಡು ಗ್ರಾಮದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಸರಕಾರಿ ಪ್ರೌಢಶಾಲೆಯ ಶಿಕ್ಷಕ ರಕ್ಷಕ ಸಭೆಯಲ್ಲಿ ಪಾಲ್ಗೊಂಡು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೆ ಕಾರಣಕರ್ತರಾದ ಅಧ್ಯಾಪಕ ವರ್ಗದವರನ್ನು ಅಭಿನಂದಿಸಿದರು.

ಶೇಕಡಾ 100 ಫಲಿತಾಂಶ ಸಾಧಿಸಿದ ಪ್ರಸ್ತುತ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾಭಿವೃದ್ಧಿ ಸಮಿತಿಯನ್ನು ಹಾಗೂ ಸಹಕರಿಸಿದ ಊರವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಬಳಿಕ ಬಂಟ್ವಾಳ ತಾಲೂಕಿನ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಜಿಪನಡು ಇಲ್ಲಿಗೆ ಭೇಟಿ ನೀಡಿದ ಶಾಸಕರು ಆಶಾ ಕಾರ್ಯಕರ್ತೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಮೊಹಮ್ಮದ್ ತುಫೈಲ್ ರವರನ್ನು ಅಭಿನಂದಿಸಿ ಅಹವಾಲು ಸ್ವೀಕರಿಸಿದರು.

ನಂತರ ಬೊಳಮೆ ಮಸೀದಿ ಹಾಗೂ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನ ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಯನ್ನು ನೀಡಿದರು.

ಬಳಿಕ ಗ್ರಾಮದ ವಿವಿಧ ಪ್ರದೇಶಗಳಾದ ಬೈಲುಗುತ್ತು, ಬಸ್ತಿಗುಡ್ಡೆ, ಕುಂಟಾಲಗುಡ್ಡೆ ಹಾಗೂ ಗೋಳಿ ಪಡ್ಪು ಪ್ರದೇಶಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ಸಜೀಪ ನಡು ವಲಯ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಜೀಪ, ಅಬ್ದುಲ್ ರಝಾಕ್ ಕುಕ್ಕಾಜೆ, ಪ್ರವೀಣ್ ಆಳ್ವಾ,

ಪಕ್ಷ ಪ್ರಮುಖರಾದ ಎಸ್.ಕೆ. ಮಹಮ್ಮದ್, ಸೋಮನಾಥ್ ಬಂಡಾರಿ, ಇಬ್ರಾಹಿಂ ,ಬಶೀರ್ ಬೋಲಮೆ ಪಂಚಾಯತ್ ಸದಸ್ಯರಾದ ಲತೀಫ್ ಬೋಲಮೆ, ರಫೀಕ್ ಗೋಳಿಪಡ್ಪು ಹಾಗೂ ಯುವ ಮುಖಂಡರಾದ ಆಸಿಫ್ ಸಜಿಪ, ನಿಸಾರ್ ಸಜಿಪ, ಹನಿಫ್ ಗೋಳಿಪಡ್ಪು ಜಸೀಮ್ ಸಜೀಪ, ಆಫ್ರಿಜ್ ಗೋಳಿಪಡ್ಪು, ಕಿಶೋರ್ ದೇರಾಜೆ, ಇಕ್ಬಾಲ್ ಗೋಳಿಪಡ್ಪು ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...