Thursday, January 29, 2026

ಸಜೀಪ ಬಿಸು ಜಾತ್ರೆ ಮುಂದೂಡಿಕೆ

 

ಬಂಟ್ವಾಳ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲೊಂ ದಾದ ಸಜೀಪ ಬಿಸು ಜಾತ್ರೆ ಮುಂದೂಡಿಕೆ ಬಂಟ್ವಾಳ ತಾಲೂಕು ಸಜೀಪಮೂಡ ಗ್ರಾಮದ ಮಿತ್ತ ಮಜಲು ಕ್ಷೇತ್ರದಲ್ಲಿ ವರ್ಷಂಪ್ರತಿ ಜರಗುವ ಸಜೀಪ ಮಾಗಣೆಯ ಜಾತ್ರೆ ಡೆಡ್ಲಿ ಕೋರೋಣ ಸೋಂಕು ರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸರಕಾರದ ಆದೇಶದಂತೆ ಅನಿವಾರ್ಯವಾಗಿ ಮುಂದೂಡಲಾಗಿದೆ 11.4 20ರಿಂದ 16 4 20ರ ತನಕ ವಿಜ್ರಂಭಣೆ ಇಂದ ಜರುಗಬೇಕಾಗಿದ ಸಜಿಪ ಮಾಗಣಿ ಬಿಸು ಜಾತ್ರೆಯ ಪ್ರಯುಕ್ತ ವಾರ್ಷಿಕ ನೇಮೋತ್ಸವ ವನ್ನು ಸದ್ಯದ ಗೊಂದಲದ ಪರಿಸ್ಥಿತಿ ಸುಧಾರಣೆ ಆಗುವತನಕ ಮುಂದೂಡಲಾಗಿದೆ ಈ ಬಗ್ಗೆ ಸಜೀಪ ಮಾಗಣೆಯ ಆಡಳಿತ ದಾರ ಹಾಗೂ ದ ಕ ಜಿಪ ಮಾಜಿ ಅಧ್ಯಕ್ಷ ಬಿ ಸದಾನಂದ ಪೂಂಜ ರ ಅಧ್ಯಕ್ಷತೆಯಲ್ಲಿ ಜರಗಿದ ಸಮಾಲೋಚನೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು ಕ್ಷೇತ್ರದ ಸಮಸ್ತ ಭಕ್ತರು ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲ ರೀತಿಯಿಂದ ಸಹಕರಿಸುವಂತೆ ಅವರು ವಿನಂತಿಸಿದರು ಈ ಸಂದರ್ಭದಲ್ಲಿ ಮಾಗಣೆಯ ತಂತ್ರಿಗಳಾದ ಸುಬ್ರಮಣ್ಯ ಬಟ್ ಎಂ ಸಜೀಪ ಗುತ್ತು ಗಡಿ ಪ್ರಧಾನ ರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚು ಬಂಡಾರಿ ಬಿಜನ್ ತಾಡಿ ಗು ತ್ತು ಶಿವರಾಮ ಬಂಡಾರಿ ಮಾಡಂತ ಡಿ ಗು ತ್ತು ಯಶೋಧರ ರೈ ಶ್ರೀಕಾಂತ್ ಶೆಟ್ಟಿ ಸಂಕೇಶ ಜೀವನ್ ಆಳ್ವ ಅಗರಿ ಪ್ರದೀಪ್ ಶೆಟ್ಟಿ ಕೋಚು ಪೂಜಾರಿ ಸಾನದ ಮನೆ ಕುoಛ್ ಪೂಜಾರಿ ಸಂಕೇಶ ವೆಂಕಪ್ಪ ಪೂಜಾರಿ ನಟ್ಟಿಲು ಉಪಸ್ಥಿತರಿದ್ದರು.

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...