Friday, June 27, 2025

ಸಜಿಪ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಮಾಹಿತಿ ಕಾರ್ಯಾಗಾರ: ಲಾಂಛನ ಅನಾವರಣ

ಸಜಿಪ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ
ಮಾಹಿತಿ ಕಾರ್ಯಾಗಾರ: ಲಾಂಛನ ಅನಾವರಣ

ಬಂಟ್ವಾಳ : ಒಳ್ಳೆಯ ಚಿಂತನೆಗಳಿಗೆ ಸಾಮಾಜಿಕ ಬೆಂಬಲ ಸದಾ ಇರುತ್ತದೆ,ಸಜಿಪ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪನೆಯೇ ಇದಕ್ಕೆ ನಿದರ್ಶನ ಎಂದು ಬಂಟ್ವಾಳ ಶಾಸಕರ ಆಪ್ತಸಹಾಯಕ ದಿನೇಶ್.ಎಂ. ಹೇಳಿದರು.
ಸಜಿಪ ಮೂಡ ಗ್ರಾಮದ ಬೇಂಕೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಟ್ರಸ್ಟ್ ನ ನೂತನ ಲಾಂಛನವನ್ನು ಅನಾವರಣಗೊಳಿಸಿ ಮಾತನಾಡಿದರು.
ಗ್ರಾಮದ ಬಡ ಫಲಾನುಭವಿಗಳು ಹಾಗೂ ಸರ್ಕಾರದ ನಡುವೆ ಟ್ರಸ್ಟ್ ಕೊಂಡಿಯಂತೆ ಕೆಲಸ ಮಾಡಲಿ‌ ಎಂದ ಅವರು,ಗ್ರಾಮದ ಜನತೆ ಇದಕ್ಕೆ ಸೂಕ್ತ ಸ್ಪಂದನೆ ನೀಡುವಂತಾಗಲಿ ಎಂದು ಹಾರೈಸಿದರು.
ಟ್ರಸ್ಟಿ ಶ್ರೀಕಾಂತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಸಜಿಪ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು.
ಕೊಣಾಜೆ ಯುವಜನ ಸೇವಾ ಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ನಮಿತಾ ಶ್ಯಾಂ ಮಾತನಾಡಿ, ಟ್ರಸ್ಟ್ ಮೂಲಕ ಜನಸೇವೆ ಮಾಡುವ ಕಾರ್ಯದಿಂದ ಪುಣ್ಯ ದೊರಕುತ್ತದೆ, ಸಜಿಪ ಜನ ಸೇವಾ ಟ್ರಸ್ಟ್ ನಲ್ಲಿ ತೊಡಗಿಸಿಕೊಂಡವರೆಲ್ಲರೂ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಮಿತ್ರ ಕವಿತಾ ಟಿ.ರೈ ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯ ಕುರಿತಾಗಿ ಮಾಹಿತಿ ನೀಡಿದರು. ವಿಮಾ ಪ್ರತಿನಿಧಿ ಉಮೇಶ್ ನಿರ್ಮಲ್ ಆರೋಗ್ಯ ವಿಮೆಯ ಕುರಿತಾಗಿ ಮಾಹಿತಿ ನೀಡಿದರು.
ಸಜೀಪ ಜನಸೇವಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಯಶವಂತ ದೇರಾಜೆ ಯವರು ಪ್ರಾಸ್ತಾವಿಕ ವಾಗಿ ಮಾತನಾಡಿ, ನಾಲ್ಕು ‌ಗ್ರಾಮಗಳ ನೊಂದವರ ಕಣ್ಣೀರು ಒರೆಸುವ ಕಾರ್ಯವನ್ನು ನಿರಂತರವಾಗಿ ನಡೆಸಲಿದೆ. ಜೊತೆಯಲ್ಲಿ ಯಾವುದೇ ಇಲಾಖೆಗಳು ಅನುಷ್ಠಾನ ಗೊಳಿಸುವ ಸರ್ಕಾರಿ ಯೋಜನೆಗಳು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಟ್ರಸ್ಟ್ ಕಾರ್ಯೋನ್ಮುಖವಾಗಲಿದೆ, ಇದಕ್ಕೆ ಪೂರಕವಾಗಿ‌ ನಾಲ್ಕು ಗ್ರಾಮಗಳ ಪ್ರತೀ ಮನೆಯ ಸಂಪೂರ್ಣ ಮಾಹಿತಿ‌ ಸಂಗ್ರಹಿಸುವ ಕಾರ್ಯ ಶೀಘ್ರ ನಡೆಯಲಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಣೆಮಂಗಳೂರು ವಲಯ ಮೇಲ್ವಿಚಾರಕಿ ಅಮಿತಾ,
ಕಂದಾಯ ಇಲಾಖೆಯ ಶ್ರೀನಿವಾಸ್ , ಟ್ರಸ್ಟಿನ ಉಪಾಧ್ಯಕ್ಷ ವಿಶ್ವನಾಥ ಬೆಳ್ಚಡ, ಟ್ರಸ್ಟಿಗಳಾದ ನವೀನ್ ಸುವರ್ಣ, ಸುನೀತಾ ಶೆಟ್ಟಿ ಮಾರ್ನಬೈಲ್, ಭರತ್ ಅಂಚನ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಟ್ರಸ್ಟಿ ಸುರೇಶ್
ಬಂಗೇರ ಸ್ವಾಗತಿಸಿದರು.
ದೀಪಕ್ ಕೋಟ್ಯಾನ್ ವಂದಿಸಿದರು. ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಕಾರ್ಯಕ್ರ‌ಮ ನಿರ್ವಹಿಸಿದರು.
ಇದೇ ವೇಳೆ ನಾಲ್ಕೂ ಗ್ರಾಮಗಳ ಜನತೆಯ ಮನೆಯ ವಿವರವನ್ನು ಸಂಗ್ರಹಿಸುವ ಸಮೀಕ್ಷಾ ಪತ್ರವನ್ನು ಗ್ರಾಮದ ಪ್ರಮುಖರಿಗೆ ವಿತರಿಸಲಾಯಿತು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...