Wednesday, January 28, 2026

ಪುರಸಭೆಯ ದಬ್ಬಾಳಿಕೆ ವಿರೋಧಿಸಿ ಸಜೀಪ ಬಂದ್

ಬಂಟ್ವಾಳ: ಜಿಲ್ಲಾಡಳಿತ, ಬಂಟ್ವಾಳ ಪುರಸಬೆಯ ದಬ್ಬಾಳಿಕೆ ಹಾಗು ಪೊಲೀಸ್ ದೌರ್ಜನ್ಯ ವಿರೋದಿಸಿ ಸಜೀಪ ನಡು ಪೇಟೆ ಇಂದು ಸ್ವಯಂ ಪ್ರೇರಿತರಾಗಿ ಸಂಪೂರ್ಣ ಬಂದ್ ಮಾಡಿದ್ದಾರೆ.
ಬುಧವಾರ ಸಂಜೆ ಸ್ಥಳೀಯರ ವಿರೋಧದ ನಡುವೆಯೂ ಪೋಲೀಸ್ ಸರ್ಪಗಾವಲಿನಲ್ಲಿ ಒಂದು ಲಾರಿ ಲೋಡ್ ಒಣ ಕಸವನ್ನು ಕಂಚಿನಡ್ಕ ಪದವಿನಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕಗಕ್ಕೆ ಡಂಪ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮಹಮ್ಮದ್ ನಾಸಿರ್ ಸಹಿತ ಗ್ರಾಮಸ್ಥರನ್ನು ಪೋಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಗೊಳಿಸಿದರು.
ನ್ಯಾಯಾಲಯದ ಆದೇಶದ ಮೇರೆಗೆ ತ್ಯಾಜ್ಯ ಸಂಸ್ಕರಿಸಲು ಎ.ಸಿ.ಅದೇಶದಂತೆ ಬುಧವಾರ ತ್ಯಾಜ್ಯ ಡಂಪ್ ಮಾಡಲಾಯಿತು.


ತ್ಯಾಜ್ಯ ಸಂಸ್ಕರಿಸಲು ನಮ್ಮ ವಿರೋಧವಿಲ್ಲ ಆದರೆ ವೈಜ್ಞಾನಿಕ ಮಾದರಿಯಲ್ಲಿ ಹಾಗೂ ಪರಿಸರ ಇಲಾಖೆಯ ನಿಬಂಧನೆಗಳನ್ನು ಮತ್ತು ಇಲ್ಲಿನ ಜನರ ಜನಪರ ಬೇಡಿಕೆಯನ್ನು ಈಡೇರಿಸಿ ಬಳಿಕ ತ್ಯಾಜ್ಯ ಡಂಪ್ ಮಾಡುವಂತೆ ಸ್ಥಳೀಯರ ಒತ್ತಾಯವಾಗಿತ್ತು.

ಆದರೆ ನ್ಯಾಯಾಲಯದ ಆದೇಶ ಅನೇಕ ವರ್ಷಗಳ ಹಿಂದೆಯೇ ಆಗಿತ್ತಾದರೂ ಇಲ್ಲಿನ ಪುರಸಭಾ ಇಲಾಖೆ ಸ್ಥಳೀಯರ ಬೇಡಿಕೆ ಈಡೇರಿಕೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ಬುಧವಾರ ಸ್ಥಳೀಯರ ಬೇಡಿಕೆಗಳಿಗೆ ಕಿಂಚಿತ್ತೂ ಬೆಲೆ ಕೊಡದೆ ಅಲ್ಲಿ ಯಾವುದೇ ವೈಜ್ಞಾನಿಕ ರೀತಿಯ ವ್ಯವಸ್ಥೆ ಮಾಡದೆ ನೇರವಾಗಿ ಒಣ ಕಸವನ್ನು ಡಂಪ್ ಮಾಡಿದ್ದಕ್ಕೆ ಅವರ ವಿರೋಧವಾಗಿದೆ.
ಇಂದು ಈ ಘಟನೆಯನ್ನು ಖಂಡಿಸಿ ಇಲ್ಲಿನ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...