Friday, July 11, 2025

ಸಜೀಪನಡು ಗ್ರಾ.ಪಂ. ಚರಂಡಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮದಿಂದಾಗಿ ಜಲಾವೃತಗೊಂಡ ಬೈಲಗುತ್ತು ಪ್ರದೇಶಕ್ಕೆ ಶಾಸಕ ಯು.ಟಿ ಖಾದರ್ ದಿಡೀರ್ ಭೇಟಿ

ಸಜೀಪನಡು: ಗ್ರಾ.ಪಂ. ಚರಂಡಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ಬೈಲಗುತ್ತು ಪ್ರದೇಶವು ಸಂಪೂರ್ಣ ಜಲಾವೃತಗೊಂಡು ಹತ್ತಾರು ಮನೆಗಳಿಗೆ ಒಮ್ಮೆಲೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡ ವಿಚಾರವು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಸಕ ಯು.ಟಿ. ಖಾದರ್ ರವರು ದಿಡೀರ್ ಭೇಟಿ ಕೊಟ್ಟು ಅಧಿಕಾರಿಗಳಿಗೆ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮುಖಾಂತರ ನೀರು ಸರಾಗವಾಗಿ ಹರಿಯುವಂತೆ ಕೂಡಲೇ ಚರಂಡಿಯ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿದ ಮೇರೆಗೆ ಇದೀಗ ಜೆಸಿಬಿ ಯಂತ್ರದ ಮುಖಾಂತರ ಚರಂಡಿಯ ಹೂಲೆತ್ತುವ ಕಾರ್ಯವು ಭರದಿಂದ ಸಾಗುತ್ತಿದೆ.

ಶಾಸಕರ ಭೇಟಿಯಿಂದ ಅಧಿಕಾರಿಗಳು ಎಚ್ಚೆತ್ತು ಕಾರ್ಯಾಚರಣೆಯನ್ನು ಕೈಗೊಂಡಿರುವುದರಿಂದ ಪರಿಸರವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಆದಂತಹ ಪ್ರಾಥಮಿಕ ಹಾಗೂ ಪ್ರೌಡ ಶಾಲೆ, ಗ್ರಾಮಪಂಚಾಯತ್ ಕಚೇರಿ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸುಣ್ಣ ಬಣ್ಣವನ್ನು ಬಳಿದು ಇದುವೇ ನಮ್ಮ ಸಾಧನೆಯೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನು ಗಿಟ್ಟಿಸುವ ವ್ಯರ್ಥ ಪ್ರಯತ್ನವನ್ನು ಮಾಡಿದ ಎಸ್ಡಿಪಿಐ ಗ್ರಾಮದ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...