Saturday, January 31, 2026

ಸಜೀಪನಡು ಕೋಣಿಮಾರು ಪ್ರದೇಶವು ಇನ್ನೊಂದು ಬಂಗ್ಲಗುಡ್ಡೆಯಾಗುವ ಭೀತಿ

ಬಂಟ್ವಾಳ: ಸಜೀಪನಡು ಗ್ರಾಮದ ಕೋಣಿಮಾರು ಎಂಬ ಪ್ರದೇಶದಲ್ಲಿ ಸುಮಾರು 35 ಅಡಿ ಎತ್ತರದಲ್ಲಿ ಕೆಂಪು ಗುಡ್ಡೆ ಎಂಬ ಪುಟ್ಟ ಪ್ರದೇಶವಿದ್ದು, ಪ್ರಸ್ತುತ ಅಲ್ಲಿ ಸುಮಾರು 15 ವಾಸದ ಮನೆಗಳಿವೆ. ಇದೀಗ ಕೆಂಪುಗುಡ್ಡೆಯು ಕುಸಿಯುತ್ತಿದ್ದು, 35 ಅಡಿ ಎತ್ತರದಲ್ಲಿರುವ ಮನೆಗಳ ಬದಿಯಲ್ಲೇ ಕುಸಿತವುಂಟಾಗುತ್ತಿದೆ.
ಅದಲ್ಲದೇ ಆ ಗುಡ್ಡದ ಕೆಳಗಡೆಯೂ ಮನೆಗಳಿದ್ದು, ಗುಡ್ಡದ ಮೇಲಿರುವ ಮನೆಗಳು ಕೆಳಗಡೆ ಇರುವ ಮನೆಗಳ ಮೇಲೆ ಕುಸಿದು ಬೀಳುವ ಹಂತದಲ್ಲಿದ್ದು, ಯಾವುದೇ ಕ್ಷಣದಲ್ಲೂ ಅವಗಡ ಸಂಭವಿಸುವ ಬೀತಿಯಲ್ಲಿ ಸ್ಥಳೀಯ ವಾಸಿಗಳು ದಿನದೂಡುತ್ತಿದ್ದಾರೆ.
ಈ ಬಗ್ಗೆ ಹಲವಾರು ಬಾರಿ ಗ್ರಾ.ಪಂ. ಗೆ ಲಿಖಿತ ದೂರನ್ನು ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ. ಈ ಪ್ರದೇಶವು ಗುರುಪುರ ಕೈಕಂಬದ ಇನ್ನೊಂದು ಬಂಗ್ಲಗುಡ್ಡೆಯಾಗುವುದಕ್ಕಿಂತ ಮುಂಚಿತವಾಗಿ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂಬುವುದು ಗ್ರಾಮಸ್ತರ ಆಗ್ರಹವಾಗಿದೆ.

More from the blog

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...