Saturday, February 8, 2025

ಜ.26-ಫೆ.3: ಸಾಲೆತ್ತೂರಿನಲ್ಲಿ ಶಿವಪಂಚಾಕ್ಷರಿ ಪಾರಾಯಣ, ಅಖಂಡ ಭಜನಾ ಸಪ್ತಾಹ

ವಿಟ್ಲ: ಸಾಲೆತ್ತೂರು ನವಚೇತನ ಯುವಕ ಮಂಡಲ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಶಿವಪಂಚಾಕ್ಷರಿ ಪಾರಾಯಣ, ಅಖಂಡ ಭಜನಾ ಸಪ್ತಾಹ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜ.26ರಿಂದ ಫೆ.3ರ ವರೆಗೆ ನಡೆಯಲಿದೆ ಎಂದು ಅಧ್ಯಕ್ಷ ಸೋಮನಾಥ ಪಾಲ್ತಾಜೆ ಹೇಳಿದರು.
ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜ.26ರಂದು ಬೆಳಗ್ಗೆ ಗಣಪತಿ ಹೋಮ, ಬೆಳಗ್ಗೆ ಸೂರ್‍ಯೋದಯದಿಂದ ಸಂಜೆ ಸೂರ್‍ಯಸ್ತದವರೆಗೆ ಸಾಮೂಹಿಕ ಶಿವಪಂಚಾಕ್ಷರಿ ಪಾರಾಯಣ ನಡೆಯಲಿದೆ.
27ರಂದು ಬೆಳಗ್ಗೆ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಅಖಂಡ ಭಜನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಬಳಿಕ ನಾನಾ ಸಂಘಗಳಿಂದ ಭಜನೆ ನಡೆಯಲಿದೆ.
ಸಂಜೆ ನಡೆಯುವ ಸಭಾ ಕಾರ್‍ಯಕ್ರಮದಲ್ಲಿ ಸೋಮನಾಥ ಪಾಲ್ತಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರ್ಮಿಕ ಮುಖಂಡ ಶ್ರೀಕೃಷ್ಣ ಭಜನೆ ಮಹತ್ವದ ಬಗ್ಗೆ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವನಾಥ ಪೂಜಾರಿ ನರ್ಕಳ, ಶಿವರಾಮ ಶೆಟ್ಟಿ ಕೊಲ್ಲಾಡಿ, ವಿದ್ಯೇಶ್ ರೈ ಕಿಲ್ಲಂಬಲೆಪಡ್ಪು, ಶೇಖರ ಪೂಜಾರಿ ಉಳಿಯತ್ತಡ್ಕ, ಗೋಪಾಲ ಸಪಲ್ಯ ಕಲ್ಲಮಜಲು, ಗೋಪಾಲ ಮಾಸ್ತರ್ ದಾರೆಪಡ್ಪು, ಲಕ್ಷ್ಮಣ ಸಪಲ್ಯ ಸಾಲೆತ್ತೂರು, ಧನಂಜಯ ಕಟ್ಟತ್ತಿಲ, ವಿಷ್ಣುಮೂರ್ತಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಯುವಕ ಮಂಡಲದ ಹಿರಿಯ ಸದಸ್ಯ ಕೃಷ್ಣಪ್ಪ ಶೆಟ್ಟಿಗಾರ್ ಮಾವೆ ಅವರನ್ನು ಸನ್ಮಾನಿಸಲಾಗುವುದು.
ಪ್ರತಿದಿನ ಸಂಜೆ ಧಾರ್ಮಿಕ ಸಭೆ, ಭಜನಾ ಸಂಕೀರ್ತನೆ, ಸಾಂಸ್ಕೃತಿಕ ಕಾರ್‍ಯಕ್ರಮ ನಡೆಯಲಿದೆ ಎಂದರು.
ಜ. 30ರಂದು ನಡೆಯುವ ಧಾರ್ಮಿಕ ಸಮಾರೋಪ ಸಮಾರಂಭದಲ್ಲಿ ಶ್ರೀಧಾಮ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಉದ್ಯಮಿ ಮಾಧವ ಮಾವೆ, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸಾಲೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಾವತಿ ಮೇಗಿನಮಲಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ ಪಿ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಟಿ. ತಾರಾನಾಥ ಕೊಟ್ಟಾರಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ವೆಂಕಪ್ಪ ಶೆಟ್ಟಿಗಾರ್ ಪಾಲ್ತಾಜೆ, ಪ್ರಧಾನ ಕಾರ್‍ಯದರ್ಶಿ ರಾಮಚಂದ್ರ ಬಿ. ಶೆಟ್ಟಿಗಾರ್ ಅಗರಿ, ಕೋಶಾಧಿಕಾರಿ ಶೇಖರ ಪೂಜಾರಿ ಮಾವೆ, ಗೌರವ ಸಲಹೆಗಾರ ಶಂಕರ್ ಶೆಟ್ಟಿಗಾರ್ ಮಾವೆ ಉಪಸ್ಥಿತರಿದ್ದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...