Tuesday, February 3, 2026

ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್‍ ಭೇಟಿ

ಬಂಟ್ವಾಳ: ಜಿಲ್ಲೆಯಲ್ಲಿ ನೆರೆ ಜಾಸ್ತಿಯಾಗುತ್ತಿದ್ದು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ ಹಾಗಾಗಿ ದ.ಕ‌.ಜಿಲ್ಲೆಯ ಲ್ಲಿ ಜಿಲ್ಲಾಧಿಕಾರಿ ಯವರ ನೇತ್ರತ್ವದಲ್ಲಿ ಜನರಿಗೆ ಪೂರ್ಣಪ್ರಮಾಣದ ಸಕಲ ವ್ಯವಸ್ಥೆ ಗಳನ್ನು ಕಲ್ಪಿಸಲಾಗಿದೆ, ಜನರು ಭಯಬೀತರಾಗುವ ಅವಶ್ಯ ಕತೆಯಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.

ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಜೊತೆ ನೆರೆಯಿಂದ ಅವೃತವಾಗಿರುವ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಿಗೆ ಬೇಟಿ ನೀಡಿದ ಬಳಿಕ ಮಾಧ್ಯಮವರ ಜೊತೆ ಮಾತನಾಡಿದರು.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕೂಡ ನೆರೆಯಿಂದ ಸಿಲುಕಿದ ಜನರನ್ನು ರಕ್ಷಣೆ ಮಾಡುವ ಕಾರ್ಯ ಶಾಸಕ ರಾಜೇಶ್ ನಾಯ್ಕ್ ಅವರ ತಂಡ ಹಾಗೂ ಅಧಿಕಾರಿಗಳಿಂದ ಇಡೀ ರಾತ್ರಿಯಿಂದ ನಡೆಯುತ್ತಿದೆ ಎಂದು ಅವರು ಹೇಳಿದರು.
ಬಂಟ್ವಾಳ ದ ಮೂರು ಕಡೆಗಳಲ್ಲಿ ಶಾಸಕರ ನೇತ್ರತ್ವದಲ್ಲಿ ಗಂಜಿ ಕೇಂದ್ರ ಗಳನ್ನು ಮಾಡಲಾಗಿದೆ. ವಸತಿ ಸೌಕರ್ಯಗಳನ್ನು ಕೂಡ ಮಾಡಲಾಗಿದೆ.
ಶಾಸಕರ ಕಾರ್ಯಾಲಯ, ಅವರ ತಂಡ, ಕೇಂದ್ರ ದ ಎನ್.ಡಿ.ಅರ್.ಎಪ್.ಹಾಗೂ ಅಗ್ನಿಶಾಮಕ ದಳ, ಪೋಲೀಸ್ ಸಿಬ್ಬಂದಿಗಳು ತಾಲೂಕಿನ ಅಧಿಕಾರಿ ಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ದೇವದಾಸ ಶೆಟ್ಟಿ , ಗೋವಿಂದ ಪ್ರಭು, ರಮಾನಾಥ ಪೈ, ಲೋಹಿತ್ ಪನೋಲಿಬೈಲು, ರಮಾನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...