Wednesday, July 9, 2025

ಹುಟ್ಟುಹಬ್ಬ ಆಚರಣೆಯಲ್ಲಿ ಆಡಂಬರ ಬೇಡ: ಕವಿತಾ

ಬಂಟ್ವಾಳ : ಆಧುನಿಕ ಜಗತ್ತಿನಲ್ಲಿ ಪಾಶ್ಚತ್ಯ ಸಂಸ್ಕೃತಿಗೆ ಮಾರುಹೋಗಿ ಕ್ಯಾಂಡಲ್ ಆರಿಸಿ ಕೇಕ್‌ಕಟ್ ಮಾಡುವುದರ ಮೂಲಕ ಅರ್ಥವಿಲ್ಲದ ಹುಟ್ಟುಹಬ್ಬವನ್ನು ಆಚರಿಸುತ್ತೇವೆ. ಹುಟ್ಟುಹಬ್ಬದ ದಿನದಂದು ಆಡಂಬರದ ಹುಟ್ಟುಹಬ್ಬ ಆಚರಿಸುವ ಬದಲು, ಪರೋಪಕಾರವನ್ನು ಮಾಡಿ ಅರ್ಥಪೂರ್ಣವಾಗಿ ಆಚರಿಸೋಣ ಎಂಬುದನ್ನು ಕಥೆಯ ಮೂಲಕ ಮಕ್ಕಳಿಗೆ ವಿವರಿಸಿ ಕಾರ್‍ಯಕ್ರಮದ ಅತಿಥಿಯಾಗಿ ಆಗಮಿಸಿದ ಕಲ್ಲಡ್ಕ ಶ್ರೀರಾಮ ಪದವಿ ವಿಭಾಗದ ರಸಾಯನ ಶಾಸ್ತ್ರದ ಉಪನ್ಯಾಸಕಿಯಾದ ಕವಿತಾ ಶುಭಹಾರೈಸಿದರು.


ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಜ. 5ರ ಶನಿವಾರದಂದು ಭಜನೆ ಮತ್ತು ನವೆಂಬರ್ ಹಾಗೂ ದಶಂಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹುಟ್ಟುಹಬ್ಬವನ್ನು ಗಿಡ ನೆಡುವುದರ ಮೂಲಕ ಆಚರಿಸಿಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಂಡು ಮೋದೀಜಿ ಕಂಡ ಕನಸನ್ನು ನನಸು ಮಾಡಿ ಎಂದು ಮಾತೃಭಾರತಿ ಸಮಿತಿಯ ಸದಸ್ಯರಾದ ಮಲ್ಲಿಕಾ ಶೆಟ್ಟಿ ಶುಭಕೋರಿದರು.
ಹುಟ್ಟುಹಬ್ಬ ಆಚರಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಶಾಲಾ ಮಾತಾಜಿಯವರು ಆರತಿ, ಅಕ್ಷತೆ, ತಿಲಕಧಾರಣೆ ಹಾಗೂ ಸಿಹಿಯನ್ನು ನೀಡಿದರು. ಹುಟ್ಟುಹಬ್ಬ ಆಚರಿಸಿಕೊಂಡ ಮಕ್ಕಳು ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ನಿಧಿ ಸಮರ್ಪಣೆ ಮಾಡಿದರು.


ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಅತಿಥಿಗಳಿಗೆ ಹೂಗುಚ್ಛ ನೀಡಿ ಸಾಂಕೇತಿಕವಾಗಿ ಸ್ವಾಗತಿಸಿದರು. 7ನೇ ತರಗತಿಯ ಜ್ಞಾನೇಶ್ ಪ್ರೇರಣಾ ಗೀತೆ ಹಾಡಿದನು. ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ನಡೆದ ವಿಧ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್‍ಯನಿರ್ವಹಿಸುತ್ತಿರುವ ಸಂಗೀತಾ, ಶಾಲಾ ಪೋಷಕರಾದ ವಾಣಿ , ಶ್ಯಾಮಲ, ಪದ್ಮನಾಭ, ಶಾಲಾ ಸಹಮುಖ್ಯೋಪಾಧ್ಯಾಯರಾದ ಸುಮಂತ್ ಆಳ್ವ ಹಾಗೂ ಪೂರ್ವಗುರುಕುಲ ಪ್ರಮುಖರಾದಂತಹ ರೂಪಕಲಾ ಉಪಸ್ಥಿತಿಯಿದ್ದರು.
ಕಾರ್‍ಯಕ್ರಮವನ್ನು ಶಿಕ್ಷಕರಾದ ಚೈತ್ರ ನಿರೂಪಿಸಿ, ಸುಮಂತ್ ಆಳ್ವ ಸ್ವಾಗತಿಸಿ, ಸುಮಿತ್ರಾ ವಂದಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...