Saturday, February 8, 2025

ಹುಟ್ಟುಹಬ್ಬ ಆಚರಣೆಯಲ್ಲಿ ಆಡಂಬರ ಬೇಡ: ಕವಿತಾ

ಬಂಟ್ವಾಳ : ಆಧುನಿಕ ಜಗತ್ತಿನಲ್ಲಿ ಪಾಶ್ಚತ್ಯ ಸಂಸ್ಕೃತಿಗೆ ಮಾರುಹೋಗಿ ಕ್ಯಾಂಡಲ್ ಆರಿಸಿ ಕೇಕ್‌ಕಟ್ ಮಾಡುವುದರ ಮೂಲಕ ಅರ್ಥವಿಲ್ಲದ ಹುಟ್ಟುಹಬ್ಬವನ್ನು ಆಚರಿಸುತ್ತೇವೆ. ಹುಟ್ಟುಹಬ್ಬದ ದಿನದಂದು ಆಡಂಬರದ ಹುಟ್ಟುಹಬ್ಬ ಆಚರಿಸುವ ಬದಲು, ಪರೋಪಕಾರವನ್ನು ಮಾಡಿ ಅರ್ಥಪೂರ್ಣವಾಗಿ ಆಚರಿಸೋಣ ಎಂಬುದನ್ನು ಕಥೆಯ ಮೂಲಕ ಮಕ್ಕಳಿಗೆ ವಿವರಿಸಿ ಕಾರ್‍ಯಕ್ರಮದ ಅತಿಥಿಯಾಗಿ ಆಗಮಿಸಿದ ಕಲ್ಲಡ್ಕ ಶ್ರೀರಾಮ ಪದವಿ ವಿಭಾಗದ ರಸಾಯನ ಶಾಸ್ತ್ರದ ಉಪನ್ಯಾಸಕಿಯಾದ ಕವಿತಾ ಶುಭಹಾರೈಸಿದರು.


ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಜ. 5ರ ಶನಿವಾರದಂದು ಭಜನೆ ಮತ್ತು ನವೆಂಬರ್ ಹಾಗೂ ದಶಂಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹುಟ್ಟುಹಬ್ಬವನ್ನು ಗಿಡ ನೆಡುವುದರ ಮೂಲಕ ಆಚರಿಸಿಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಸ್ವಚ್ಛತೆಯನ್ನು ಕಾಪಾಡಿಕೊಂಡು ಮೋದೀಜಿ ಕಂಡ ಕನಸನ್ನು ನನಸು ಮಾಡಿ ಎಂದು ಮಾತೃಭಾರತಿ ಸಮಿತಿಯ ಸದಸ್ಯರಾದ ಮಲ್ಲಿಕಾ ಶೆಟ್ಟಿ ಶುಭಕೋರಿದರು.
ಹುಟ್ಟುಹಬ್ಬ ಆಚರಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಶಾಲಾ ಮಾತಾಜಿಯವರು ಆರತಿ, ಅಕ್ಷತೆ, ತಿಲಕಧಾರಣೆ ಹಾಗೂ ಸಿಹಿಯನ್ನು ನೀಡಿದರು. ಹುಟ್ಟುಹಬ್ಬ ಆಚರಿಸಿಕೊಂಡ ಮಕ್ಕಳು ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ನಿಧಿ ಸಮರ್ಪಣೆ ಮಾಡಿದರು.


ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಅತಿಥಿಗಳಿಗೆ ಹೂಗುಚ್ಛ ನೀಡಿ ಸಾಂಕೇತಿಕವಾಗಿ ಸ್ವಾಗತಿಸಿದರು. 7ನೇ ತರಗತಿಯ ಜ್ಞಾನೇಶ್ ಪ್ರೇರಣಾ ಗೀತೆ ಹಾಡಿದನು. ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ನಡೆದ ವಿಧ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್‍ಯನಿರ್ವಹಿಸುತ್ತಿರುವ ಸಂಗೀತಾ, ಶಾಲಾ ಪೋಷಕರಾದ ವಾಣಿ , ಶ್ಯಾಮಲ, ಪದ್ಮನಾಭ, ಶಾಲಾ ಸಹಮುಖ್ಯೋಪಾಧ್ಯಾಯರಾದ ಸುಮಂತ್ ಆಳ್ವ ಹಾಗೂ ಪೂರ್ವಗುರುಕುಲ ಪ್ರಮುಖರಾದಂತಹ ರೂಪಕಲಾ ಉಪಸ್ಥಿತಿಯಿದ್ದರು.
ಕಾರ್‍ಯಕ್ರಮವನ್ನು ಶಿಕ್ಷಕರಾದ ಚೈತ್ರ ನಿರೂಪಿಸಿ, ಸುಮಂತ್ ಆಳ್ವ ಸ್ವಾಗತಿಸಿ, ಸುಮಿತ್ರಾ ವಂದಿಸಿದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...