Friday, June 27, 2025

ಮೂರುಕಜೆ ಗುರುಕುಲದಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವರ ಸಂವಾದ

ವಿಟ್ಲ: ಗುರುಕುಲ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಮಧ್ಯೆ ಪ್ರವೇಶಿಸದೇ ಮಕ್ಕಳು ಪ್ರಶಾಂತವಾಗಿ ಶಿಕ್ಷಣ ಕಲಿಯಲು ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು. ಮಕ್ಕಳಿಗೆ ಗುರುಕುಲಗಳು ಮನೆಯ ವಾತಾವರಣವನ್ನು ಕಲ್ಪಿಸುತ್ತದೆ.
ಗುರುಕುಲದ ಕಾರ್ಯವೈಖರಿ ಎಲ್ಲರಿಗೂ ಮಾದರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಅವರು ವಿಟ್ಲ ಸಮೀಪದ ಮೂರುಕಜೆ ಮೈತ್ರೇಯಿ ಗುರುಕುಲದಲ್ಲಿ ಸೋಮವಾರ ವಿದ್ಯಾರ್ಥಿಗಳ ಜತೆಗೆ ಸಂವಾದ ಕಾರ್ಯಕ್ರಮ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮಾಡುವ ನಿಟ್ಟಿನಲ್ಲಿ ರಾಜ್ಯಗಳ ಅಭಿಪ್ರಾಯ ಕೇಳಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಪೂರ್ಣ ಶಿಕ್ಷಣದ ಸಿಗುವ ಕಾರ್ಯವಾಗಬಹುದು. ಮೀಸಲಾತಿಯಿಂದ ಸಾಕಷ್ಟು ಪ್ರಯೋಜನಗಳಿದ್ದು, ಅದನ್ನು ಮುಂದುವರಿಸುವ ಅಗತ್ಯವಿದೆ ಎಂದು ತಿಳಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಗುರುಕುಲ ಮಾರ್ಗದರ್ಶಕ ಮಂಡಳಿಯ ಡಾ. ರಾಮಚಂದ್ರ ಭಟ್ ಕೋಟೆಮನೆ, ಕಜಂಪಾಡಿ ಸುಬ್ರಮಣ್ಯ ಭಟ್, ಅಜೇಯ ವಿಶ್ವಸ್ಥ ಮಂಡಳಿ ಅಧ್ಯಕ್ಷ ಎಸ್.ಆರ್. ರಂಗಮೂರ್ತಿ, ಕಾರ್ಯದರ್ಶಿ ರವೀಂದ್ರ ಪಿ., ಕೋಶಾಧಿಕಾರಿ ಸುಬ್ರಾಯ ಪೈ, ಸೀತಾರಾಮ ಕೆದಿಲಾಯ, ಎ.ಎಸ್ ಭಟ್, ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಮತ್ತಿತರರು ಉಪಸ್ಥಿತರಿದ್ದರು.
ಮಾತೃಶ್ರೀ ವಿದ್ಯಾಧರೆ ಸ್ವಾಗತಿಸಿದರು. ಶೃತಿ ಪ್ರಸ್ತಾವನೆಗೈದರು. ಸಿಂಚನಾ, ವೈಷ್ಣವಿ ಗುರುಕುಲದ ದಿನಚರಿಯ ಮಾಹಿತಿ ನೀಡಿದರು. ಶುತಕೀರ್ತಿ ವಂದಿಸಿದರು. ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...