Thursday, February 13, 2025

ಬಂಟ್ವಾಳ: ರಾಷ್ಟ್ರೀಯ ಶಿಕ್ಷಣ ನೀತಿ ಸಂವಾದ

ಬಂಟ್ವಾಳ: ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2019 (ಕರಡು) ಕುರಿತು ಗುರುವಾರ ಬಂಟ್ವಾಳ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
 ಪಡಿ ನಿರ್ದೇಶಕ ರೆನ್ನಿ ಡಿಸೋಜ ಅವರು, ಶಿಕ್ಷಣ ನೀತಿ ಕುರಿತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಅವಶ್ಯಕತೆ, ಪ್ರಮುಖ ಪಾತ್ರ, ಶಿಕ್ಷಕರ ಸಹಭಾಗಿತ್ವ ವಿಚಾರದ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ತರಬೇತಿ, ಪ್ರಾರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣವನ್ನು ಬಲಪಡಿಸುವಿಕೆ, ಎಲ್ಲಾ ಮಕ್ಕಳಲ್ಲೂ ಸಾರಕ್ಷತೆ ಮತ್ತು ಗಣಿತ ಕೌಶಲಗಳ ಭದ್ರ ಬುನಾದಿ ರೂಪಿಸುವಿಕೆ, ಶಿಕ್ಷಣದ ಎಲ್ಲಾ ಮಟ್ಟದಲ್ಲೂ ಸಾರ್ವತ್ರಿಕ ಪ್ರವೇಶ ಮತ್ತು ಧಾರಣತೆಯನ್ನು ಕಾಪಾಡುವಿಕೆ, ಶಾಲಾ ಶಿಕ್ಷಣಕ್ಕಾಗಿ ಹೊಸ ಪಠ್ಯಕ್ರಮ ಮತ್ತು ಬೋಧನಾ ಕ್ರಮ ಮತ್ತಿತರ ಪ್ರಮುಖ ಅಂಶಗಳ ಕುರಿತು ಚರ್ಚಿಸಲಾಯಿತು.
 ಸಮೂಹ ಸಂಪನ್ಮೂಲ ಕೇಂದ್ರದ ಮುಖ್ಯಸ್ಥರು, ಕ್ಲಸ್ಟರ್ ಮುಖ್ಯಸ್ಥರು, ಶಾಲಾ ಮುಖ್ಯಶಿಕ್ಷಕರು ಹಾಗೂ ಆಯ್ದ ಶಿಕ್ಷಕರು ಸಂವಾದದಲ್ಲಿ ಭಾಗವಹಿಸಿದರು.
 ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್, ಪಂಚಾಯತ್ ರಾಜ್ ತರಬೇತಿದಾರ ಮಂಜು ವಿಟ್ಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಫಾರೂಕ್ ಬಂಟ್ವಾಳ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಂದಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...