Wednesday, February 4, 2026

ಮಹಿಳೆಯರು ಮಾನಸಿಕ ಒತ್ತಡದಿಂದ ವಿಮುಕ್ತರಾಗುವ ಮೂಲಕ ಮಹಿಳಾ ಸಬಲೀಕರಣ ಸಾದ್ಯ: ಡಾ| ಸೀಮಾ ಸುದೀಪ್

ಬಂಟ್ವಾಳ : ಮಹಿಳೆಯರು ಉತ್ತಮ ಆರೋಗ್ಯವನ್ನು ಗಳಿಸಿಕೊಂಡು, ಶುಚಿತ್ವದ ಕಡೆಗೆ ಗಮನ ಹರಿಸಿ,ಸೋಮರಿತನ ಬಿಟ್ಟು ಯಾವುದಾದರೊಂದು ವೃತ್ತಿಯನ್ನು ಕೈಗೊಂಡು ಜೀವನದಲ್ಲಿ ಉದ್ಬವಿಸಬಹುದಾದ ಎಲ್ಲಾ ಸವಾಲುಗಳನ್ನು ಎದುರಿಸಿ ಮಾನಸಿಕ ಒತ್ತಡದಿಂದ ವಿಮುಕ್ತರಾದಾಗ ಮಹಿಳಾ ಸಬಲೀಕರಣ ಸಾಕಾರಗೊಳ್ಳಲು ಸಾದ್ಯ ಎಂದು ಸಿದ್ದಕಟ್ಟೆ ಅನಂತ ಪದ್ಮಾ ಹೆಲ್ತ್ ಸೆಂಟರ್ ನ ವೈದ್ಯರಾದ ಡಾ:ಸೀಮಾ ಸುದೀಪ್ ಹೇಳಿದರು.

ಅವರು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಸಂಗಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಹಿಳಾ ಸಬಲೀಕರಣ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಗಂಡು ಮತ್ತು ಹೆಣ್ಣು ಒಂದೇ ನಾಣ್ಯದ ಎರಡು ಮಖಗಳಂತೆ ಒಬ್ಬರನೊಬ್ಬರು ಪರಸ್ಪರ ಹೊಂದಾಣಿಕೆ ಜೀವನ ಸಾಗಿಸುವ ಪ್ರವೃತ್ತಿ ಅನುಸರಿಸ ಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಉಪಾದ್ಯಕ್ಷರಾದ ವಿಮಲ ಮೋಹನ್ ಮಾತನಾಡಿ ಮಹಿಳೆಯರು ಕೀಳರಿಮೆ ಬಿಟ್ಟು ಸಮಾಜದಲ್ಲಿ ಮುಂಚೂಣಿ ಪಾತ್ರವಹಿಸ ಬೇಕು ಎಂದು ಶುಭ ಕೋರಿದರು.

ವೇದಿಕೆಯಲ್ಲಿ ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ನಿರ್ದೇಶಕಿ ಮಂದಾರತಿ ಶೆಟ್ಟಿ, ಮಹಿಳಾ ಸಂಘ ದ ಡೆನ್ಸಿ ಜ್ಯೋತಿ, ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿಯ ಅಧ್ಯಕ್ಷ ಮೈಕಲ್ ಡಿ’ಕೋಸ್ತ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೀವಿ ಕೋಟ್ಯಪ್ಪ ಪೂಜಾರಿ, ಹೇಮಲತಾ,ಶಕುಂತಲಾ ಬೆನಡಿಕ್ಟ ಡಿ’ಕೊಸ್ತ ,ಶಾರದ,ಪ್ರೇಮ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಯ ಸದಸ್ಯರಾದ ರೋ|ಮೋಹನ್ ಜಿ.ಮೂಲ್ಯ,ರೋ|ಎಚ್.ಎ.ರಹಿಮಾನ್ ಹಾಗೂ ಆಶಾ ಕಾರ್ಯಕರ್ತರು,ಅಂಗನವಾಡಿ ಕಾರ್ಯಕರ್ತೆಯರು , ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು,ಊರಿನ ಮಹಿಳೆಯರು ಭಾಗವಹಿಸಿದ್ದರು.

ಸಂಗಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶೋಭಾ ಸ್ವಾಗತಿಸಿ, ಧನ್ಯವಾದ ವಿತ್ತರು.ಗ್ರಾಮ ಪಂಚಾಯತ್ ಕಾರ್ಯದರ್ಶಿ ರೋಹಿಣಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...