Thursday, June 26, 2025

ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಮನೆ ಬಾಗಿಲಿಗೆ ಸೌಲಭ್ಯ ವಿತರಣೆ

ಬಂಟ್ವಾಳ : ಸಂಗಬೆಟ್ಟು ಗ್ರಾಮ ಪಂಚಾಯತ್ ತನ್ನ ಸ್ವಂತ ನಿಧಿಯಾಡಿಯಲ್ಲಿ ವಿಕಲಚೇತನರಿಗೆ ಈ ವರ್ಷದಲ್ಲಿ ಮಿಸಲಿರಿಸಿದ ಸೂಮಾರು 40000 ಅನುದಾನದಲ್ಲಿ ವಿಕಲ ಚೇತನರಿಗೆ ಸಹಾಯಧನ ವಿತರಣೆ ಮಾಡಲಾಗಿದ್ದು ಮನೆಯಿಂದ ಪಂಚಾಯತ್ ಕಚೇರಿಗೆ ಬರಲು ಆಸಾಧ್ಯವಾದವರಿಗೆ ಮನೆ ಬಾಗಿಲಿಗೆ ಹೋಗಿ ಸವಲತ್ತುನ ಸಹಾಯ ಧನ ವಿತರಿಸಲಾಯಿತು.

ವಿಕಲ ಚೇತನರಿಗೆ ತಲಾ 5000 ದಂತೆ ವಿತರಣೆ ಮಾಡಲಾಗಿದೆ.

ಕೊರೋಣಾ ದಿಂದಾಗಿ ಲಾಕ್ ದೌನ್ ಇರುವ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದ ಕರ್ಪೆ ಗ್ರಾಮದ ನಿವಾಸಿ ವಿಕಲ ಚೇತನರಾದ ಶೇಖರ ಪೂಜಾರಿ ಮನೆಗೆ ಗ್ರಾಮ ಪಂಚಾಯತ್ ಆಡಳಿತವು ಭೇಟಿ ನೀಡಿ ಕುಟುಂಬಕ್ಕೆ ಗ್ರಾಮ ಪಂಚಾಯತ್ ನೆರವಾಗುವ ಮುಲಕ ಆಸರೆ ಯಾಗಿರುವುದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ಸಹಾಯಧನ ಚೆಕ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ ಅಲಕ್ಕೆ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ರಾಜೀವಿ ಕೋಟಿಯಪ್ಪ ಪೂಜಾರಿ, ವಿದ್ಯಾ ಪ್ರಭು, ದಾಮೋದರ ಪೂಜಾರಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್, ಉಪಸ್ಥಿತರಿದ್ದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...