Thursday, June 26, 2025

ವಿಟ್ಲ: ಯಕ್ಷಸಿಂಧೂರ ವತಿಯಿಂದ ಕಲಾವಿದರಿಗೆ ಸನ್ಮಾನ, ಬಯಲಾಟ

ವಿಟ್ಲ : ವಿಟ್ಲ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ ವಿಟ್ಲ ಶ್ರೀ ಭಗವತೀ ದೇವಸ್ಥಾನದ ಜಾತ್ರೆ ಮಹೋತ್ಸವ ಸಂದರ್ಭ ಬಾಲಕಲಾವಿದರ ಬಯಲಾಟ, ಹಿರಿಯ ಕಲಾವಿದರಿಗೆ ಸಮ್ಮಾನ ಮತ್ತು ಪ್ರಸಿದ್ಧ ಕಲಾವಿದರ ಬಯಲಾಟ ಮಂಗಳವಾರ ನಡೆಯಿತು.
ಶ್ರೀ ಕಟೀಲು ಮೇಳದ ನಿವೃತ್ತ ಹಿಮ್ಮೇಳ ವಾದಕ ಪೆರುವಾಯಿ ನಾರಾಯಣ ಭಟ್ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್‍ಯ ವೆಂಕಟರಾಮ ಭಟ್ ಸುಳ್ಯ ಅಭಿನಂದನ ಭಾಷಣ ಮಾಡಿದರು.
ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ.ಚರಣ್ ಕಜೆ ಭಾಗವಹಿಸಿದ್ದರು. ಇದೇ ಸಂದರ್ಭ ಕಸಾಪ ವತಿಯಿಂದ ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರನ್ನು ಸಮ್ಮಾನಿಸಲಾಯಿತು. ಕಲಾವಿದ, ಉಪನ್ಯಾಸಕ ರಾಧಾಕೃಷ್ಣ ಕಲ್ಚಾರ್ ಅಭಿನಂದನ ಭಾಷಣ ಮಾಡಿದರು.
ಯಕ್ಷ ಸಿಂಧೂರ ಪ್ರತಿಷ್ಠಾನದ ಸಂಚಾಲಕ ಚಣಿಲ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಧರ ವನಭೋಜನ ನಿರೂಪಿಸಿದರು. ಹಿಮ್ಮೇಳ ನಾದನಿನಾದ ಕಾರ್‍ಯಕ್ರಮ, ಕರ್ಗಲ್ಲು ವಿಶ್ವೇಶ್ವರ ಭಟ್ ನಿರ್ದೇಶನದಲ್ಲಿ ಬಾಲಕಲಾವಿದರಿಂದ ಪ್ರಮೀಳಾ ಸಂಧಾನ ವೀರ ವೈಷ್ಣವ ಯಕ್ಷಗಾನ ಬಯಲಾಟ ಮತ್ತು ಪ್ರಸಿದ್ಧ ಕಲಾವಿದರಿಂದ ಸತ್ವ ಪರೀಕ್ಷೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...