Wednesday, January 28, 2026

ವಿವಿಧ ಸಾಧಕರಿಗೆ ಸನ್ಮಾನ

ಬಂಟ್ವಾಳ : ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು    ಮೊಡಂಕಾಪುವಿನ  ಪರಾರಿಗುತ್ತು ವಿನಲ್ಲಿ ಜರಗಿದ ಯಕ್ಷಗಾನ ಬಯಲಾಟದ ರಂಗಮಂಟಪದಲ್ಲಿ ಸನ್ಮಾನಿಸಲಾಯಿತು. ನಿವೃತ್ತ ಮುಖ್ಯೊಪಾಧ್ಯಾಯ  ವಿಲಿಯಂ ಆಂಡ್ರೂ ಪಿಂಟೋ , ನಿವೃತ್ತ  ಅಧ್ಯಾಪಕರಾದ ಕೆ.ಸೀತಾರಾಮ ಭಟ್, ಟಿ.ಬಾಬು ಗೌಡ, ಎಚ್.ನಾರಾಯಣ ಹೆಬ್ಬಾರ್ ಮತ್ತು ತೆಂಕುತಿಟ್ಟಿನ ಪ್ರಸಿದ್ಧ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ ರವರನ್ನು  ಸನ್ಮಾನಿಸಿ ಅಭಿನಂದಿಸಲಾಯಿತು. ಬಂಟ್ವಾಳ     ಎಸ್.ವಿ.ಎಸ್ ಕಾಲೇಜಿನ  ಪ್ರಾಂಶುಪಾಲ ಪಾಂಡುರಂಗ ನಾಯಕ್ ಸನ್ಮಾನಿಸಿದರು..ಈ ಸಂದರ್ಭದಲ್ಲಿ ರಾಜೀವ್ ಆಳ್ವ ಪೊನ್ನೋಡಿ, ನಿವೃತ್ತ ಬ್ಯಾಂಕ್ ಅಧಿಕಾರಿ ಜಯಂತ್ ಶೆಟ್ಟಿ, ದಾಸಪ್ಪ ಶೆಟ್ಟಿ ಬಿ.ಸಿ.ರೋಡ್, ರಮೇಶ್ ಪೂಂಜ ಮರವೂರು, ಕರುಣಾಕರ ಶೆಟ್ಟಿ, ಶಂಕರ್ ಶೆಟ್ಟಿ, ದಿವಾಕರ್ ಶೆಟ್ಟಿ, ಭಾಸ್ಕರ್ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ನವೀನ್ ಶೆಟ್ಟಿ, ಮುಂಡಾಜೆಗುತ್ತು, ಪ್ರಕಾಶ್ ಬಿ.ಶೆಟ್ಟಿ ಶ್ರೀ ಶೈಲ ತುಂಬೆ, ಸತೀಶ್ ಶೆಟ್ಟಿ ಮೊಡಂಕಾಪು, ಸದಾಶಿವ ಪೂಂಜ, ಗಣೇಶ್ ಶೆಟ್ಟಿ, ಕಿಶೋರ್ ಭಂಡಾರಿ ಬೆಳ್ಳೂರು ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಶ್ರೀ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ   ಯಕ್ಷಗಾನ ಬಯಲಾಟ ನಡೆಯಿತು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...