Thursday, February 13, 2025

ವಿವಿಧ ಸಾಧಕರಿಗೆ ಸನ್ಮಾನ

ಬಂಟ್ವಾಳ : ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು    ಮೊಡಂಕಾಪುವಿನ  ಪರಾರಿಗುತ್ತು ವಿನಲ್ಲಿ ಜರಗಿದ ಯಕ್ಷಗಾನ ಬಯಲಾಟದ ರಂಗಮಂಟಪದಲ್ಲಿ ಸನ್ಮಾನಿಸಲಾಯಿತು. ನಿವೃತ್ತ ಮುಖ್ಯೊಪಾಧ್ಯಾಯ  ವಿಲಿಯಂ ಆಂಡ್ರೂ ಪಿಂಟೋ , ನಿವೃತ್ತ  ಅಧ್ಯಾಪಕರಾದ ಕೆ.ಸೀತಾರಾಮ ಭಟ್, ಟಿ.ಬಾಬು ಗೌಡ, ಎಚ್.ನಾರಾಯಣ ಹೆಬ್ಬಾರ್ ಮತ್ತು ತೆಂಕುತಿಟ್ಟಿನ ಪ್ರಸಿದ್ಧ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ ರವರನ್ನು  ಸನ್ಮಾನಿಸಿ ಅಭಿನಂದಿಸಲಾಯಿತು. ಬಂಟ್ವಾಳ     ಎಸ್.ವಿ.ಎಸ್ ಕಾಲೇಜಿನ  ಪ್ರಾಂಶುಪಾಲ ಪಾಂಡುರಂಗ ನಾಯಕ್ ಸನ್ಮಾನಿಸಿದರು..ಈ ಸಂದರ್ಭದಲ್ಲಿ ರಾಜೀವ್ ಆಳ್ವ ಪೊನ್ನೋಡಿ, ನಿವೃತ್ತ ಬ್ಯಾಂಕ್ ಅಧಿಕಾರಿ ಜಯಂತ್ ಶೆಟ್ಟಿ, ದಾಸಪ್ಪ ಶೆಟ್ಟಿ ಬಿ.ಸಿ.ರೋಡ್, ರಮೇಶ್ ಪೂಂಜ ಮರವೂರು, ಕರುಣಾಕರ ಶೆಟ್ಟಿ, ಶಂಕರ್ ಶೆಟ್ಟಿ, ದಿವಾಕರ್ ಶೆಟ್ಟಿ, ಭಾಸ್ಕರ್ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ನವೀನ್ ಶೆಟ್ಟಿ, ಮುಂಡಾಜೆಗುತ್ತು, ಪ್ರಕಾಶ್ ಬಿ.ಶೆಟ್ಟಿ ಶ್ರೀ ಶೈಲ ತುಂಬೆ, ಸತೀಶ್ ಶೆಟ್ಟಿ ಮೊಡಂಕಾಪು, ಸದಾಶಿವ ಪೂಂಜ, ಗಣೇಶ್ ಶೆಟ್ಟಿ, ಕಿಶೋರ್ ಭಂಡಾರಿ ಬೆಳ್ಳೂರು ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಶ್ರೀ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ   ಯಕ್ಷಗಾನ ಬಯಲಾಟ ನಡೆಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...