Tuesday, July 8, 2025

ಪತ್ರಕರ್ತರ ಕ್ಷೇಮಾಭಿವೃದ್ದಿ ಯೋಜನೆ ಜಾರಿಗೆ ಬದ್ದ : ಸಿಎಂ ಎಚ್ ಡಿ.ಕುಮಾರ ಸ್ವಾಮಿ

ಮೈಸೂರು: ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿಗೆ ರಾಜ್ಯ ಸರಕಾರ ಸಿದ್ದವಿದ್ದು, ಜಾರಿಯಲ್ಲಿರುವ ಕ್ಷೇಮಾಭಿವೃದ್ದಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಮ್ಮ ಸರಕಾರ ಬದ್ದವಾಗಿದೆ ಎಂದು  ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ಎರಡುದಿನಗಳ ಕಾಲ ಸುತ್ತೂರು ಕ್ಷೇತ್ರದಲ್ಲಿ ನಡೆಯುವ 34ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಮೊದಲದಿನವಾದ ಶುಕ್ರವಾರ  ಅವರು ಭಾಗವಹಿಸಿ ಮಾತನಾಡುತ್ತಿದ್ದರು.

ಪತ್ರಿಕೋದ್ಯಮ ಇಂದು ಬದಲಾಗುತ್ತಿರುವ ಕಾಲಘಟ್ಟದಲ್ಲಿ ಅನೇಕ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಸುದ್ದಿ ಮನೆಗಳಲ್ಲಿ ದುಡಿಯುವ ಪತ್ರಕರ್ತರು ಆರೋಗ್ಯ , ಆರ್ಥಿಕ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿರುವುದನ್ನು ಕಂಡಿದ್ದು,ಇದಕ್ಕಾಗಿ ಕ್ಷೇಮಾಭಿವೃದ್ದಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ಚಿಂತನೆ ನಡೆಸಿದೆ ಎಂದರು. ಪತ್ರಕರ್ತರು ನೇರವಂತಿಕೆ,ನಿಷ್ಠುರತೆ,ವಸ್ತುನಿಷ್ಠ ಹಾಗೂ ಸತ್ಯ ನಿಷ್ಠ ವರದಿಗಳನ್ನು ನೀಡುತ್ತಾ ಸದಾ ಕಾಲ ಎತ್ತಿಹಿಡಿಯಬೇಕೆಂದು ಆಶಯ ವ್ಯಕ್ತಪಡಿಸಿದರು. ಮಾಧ್ಯಮಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವ ಬದ್ದತೆಯನ್ನು ಅಳವಡಿಸಕೊಳ್ಳಬೇಕಾಗಿದೆ ಎಂದರು.ಮಾಧ್ಯಮ ಕ್ಷೇತ್ರ ನಾಗಾಲೊಇಟದಲ್ಲಿ ಬೆಳೆಯುತ್ತಿದ್ದು,ವಿದ್ಯುನ್ಮಾನ ಕ್ಷೇತ್ರವಂತು ವಿಸ್ತಾರಗೊಳ್ಳತ್ತಲೆ ಇದೆ. ಮಾಧ್ಯಮಗಳು ಮಾನವೀಯ ಕಳಕಳಿಯುಳ್ಳ ,ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವ ಸುದ್ದಿಗಳ ಹಾಗೂ ವಿಚಾರಗಳಿಗೆ ಹೆಚ್ಚಿನ ಗಮನಹರಿಸಬೇಕೆಂದರು.   ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ,  ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್,  ಸಣ್ಣ ನೀರಾವರಿ ಸಚಿವ ಪುಟ್ಟರಾಜು,  ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು, ಶಾಸಕರಾದ ಹರ್ಷವರ್ಧನ್ ,ಎಚ್.ವಿಶ್ವನಾಥ್, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಎಚ್.ಬಿ. ದಿನೇಶ್,ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಮೊದಲಾದವರು ಉಪಸ್ಥಿತರಿದ್ದರು. ವಿಶ್ರಾಂತ ಪತ್ರಕರ್ತರಾದ ನಾಡೋಜ ಡಾ.ಪಾಟೀಲ್ ಪುಟ್ಟಪ್ಪ,ಎಚ್.ಎಸ್.ದೊರೆಸ್ವಾಮಿ ಅವರನ್ನು ಸನ್ಮಾನಿಸಲಾತು ಹಾಗೂ ಹಿರಿಯ ಪತ್ರಕರ್ತರಾದ ಈಶ್ವರ ದೈತೋಟ ಗೊಮ್ಮಟ ಮಾಧ್ಯಮ ಮತ್ತು.  ಅಂಶಿ ಪ್ರಸನ್ನಕುಮಾರ್ ಡಿವಿಜಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾತಿತು. ಇದೇವೇಳೆ’ ಮಾಧ್ಯಮ’ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿಯವರು ಬಿಡುಗಡೆಗೊಳಿಸಿದರು. ಶ್ರೀಲಂಕ, ಕೊಲಂಬೋಅಂತರಾಷ್ಟ್ರೀಯಪೊಟೋಜರ್ನಲಿಸ್ಟ್ ಗೀತಿಕಾತಾಲೂಕದಾರ್,ಶ್ರೀಲಂಕ ಕೊಲಂಬೋ ಡೈಲಿ ಮಿರರ್ ನ ಸುದ್ದಿ ಸಂಪಾದಕ ಕುರುಲು ಕೂಜಾಣ ಕರಿಯಕರವಣ,ನೇಪಾಳ ಕಠ್ಮಂಡು ಮೆಟ್ರೋ ಎಫ್.ಎಂ. ನ ನ್ಯೂಸ್ ಎಡಿಟರ್ ಅಶೋಕ ಸಿಲ್ವಲ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಸ್ತಾವಿಸಿ,ಸ್ವಾಗತಿಸಿದರು.ಹಾಗೆಯೇ ವಿವಿಧ ಬೇಡಿಕೆಗಳ ಮನವಿಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಯಿತು.

ಗೋಷ್ಠಿಗಳು : ಮಾಧ್ಯಮ ಮತ್ತು ರಾಜಕಾರಣ,  ಹಾಗೂ ಸಮೂಹ ಮಾಧ್ಯಮ, ಸ್ವಯಂ ನೀತಿ ಸಂಹಿತೆ ವಿಚಾರದ ಕುರಿತು ಗೋಷ್ಠಿಗಳು ನಡೆಯಿತು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...