Sunday, June 29, 2025

ಸಿದ್ಧಗಂಗ ಮಠದ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ತಮ್ಮ ಬಾಳನ್ನು ಸಾರ್ಥಕವಾಗಿ ಪೂರೈಸಿದ್ದಾರೆ: ವೀರೇಂದ್ರ ಹೆಗ್ಗಡೆ

ಶಾಸ್ತ್ರಗಳಲ್ಲಿ ದೇಹ ಮತ್ತು ಆತ್ಮದ ಬೇಧವನ್ನು ತಿಳಿಸಲಾಗಿದೆ. ಆತ್ಮಕಲ್ಯಾಣಕ್ಕಾಗಿ ಮತ್ತು ಸಮಾಜೋನ್ನತಿಗಾಗಿಯೇ ದೇಹವನ್ನು ಬಳಸಬೇಕು ಎನ್ನುವುದು ಭಾರತೀಯರ ನಂಬಿಕೆ. ತಮ್ಮ ಬದುಕನ್ನು ಯಶಸ್ವಿಯಾಗಿ ನಿರ್ವಹಿಸುವುದು ಹೇಗೆ ಎಂಬುದನ್ನು ಸ್ವಾಮೀಜಿಯವರು ತಮ್ಮ ಬದುಕಿನಲ್ಲಿ ಮಾದರಿಯಾಗಿ ಸ್ವಾಮೀಜಿ ತೋರಿಸಿಕೊಟ್ಟವರು. ಬಾಲ್ಯದಿಂದಲೇ ವಿರಕ್ತಿ ಮಾರ್ಗವನ್ನು ಅನುಸರಿಸಿ, ಆತ್ಮೋನ್ನತಿಗಾಗಿ ಪೂಜೆ, ಧ್ಯಾನ, ತಪಸ್ಸು- ಅಂತೆಯೇ ಸಮಾಜದ ಮತ್ತುದೇಶದ ಕಲ್ಯಾಣಕ್ಕಾಗಿ ದೇಹವನ್ನು ಕೊರಡಿನಂತೆ ಸವೆಸಿದರು. ಅವರು ಧಾರ್ಮಿಕರಾದರೂ ಅವರಲ್ಲಿದೇಶ ಭಕ್ತಿ ಆಳವಾಗಿ ನೆಲೆಯೂರಿತ್ತು. ದೇಶ ಉದ್ಧಾರವಾಗಬೇಕಾದರೆ ಜನತೆಯ ಬಡತನ ನಿವಾರಣೆಯಾಗಬೇಕು. ವಿದ್ಯಾರ್ಜನೆಗೆ ಅವಕಾಶಗಳಿರಬೇಕು ಎಂದು ಅವರು ಯೋಜನೆಗಳನ್ನು ಹಾಕಿಕೊಂಡವರು.
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಸಿದ್ಧಗಂಗ ಮಠದಲ್ಲಿ ಶಿಕ್ಷಣ ಪಡೆದು ತಮ್ಮ ಬಾಳಿನಲ್ಲಿ ಬದಲಾವಣೆಯನ್ನು ಕಂಡರು. ಮೂರು ತಲೆಮಾರುಗಳ ಶಿಕ್ಷಣದಿಂದ ಸಮಾಜದಲ್ಲಿದ್ದ ಜಾತೀಯತೆಯ ಅಂತರಗಳನ್ನು ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶವನ್ನು ನೀಡಿದರು.
ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ಸ್ವ-ಉದ್ಯೋಗಕ್ಕೆ ಮಾರ್ಗದರ್ಶನ ನೀಡಿದರು. ಅವರ ಪ್ರೇರಣೆಯಿಂದ ನೂರಾರು ಮಠ-ಮಂದಿರಗಳು ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿದವು. ಹಳ್ಳಿ-ಹಳ್ಳಿಗಳಲ್ಲಿ ಶೈಕ್ಷಣಿಕ ಕ್ರಾಂತಿಯಾಯಿತು.
ಪೂಜ್ಯರು ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಹಿರಿಯರಾಗಿದ್ದರು. ಕಳೆದ 72 ವರ್ಷಗಳಲ್ಲಿ ಕರ್ನಾಟಕದ ಸರ್ಕಾರಗಳು ರಚನೆಯಾದಾಗ ಪೂಜ್ಯಶ್ರೀಗಳ ಆಶೀರ್ವಾದ ಪಡೆಯಲು ಮುತ್ಸದ್ಧಿಗಳು ಧಾವಿಸುತ್ತಿದ್ದರು. ಪೂಜ್ಯರು ತಮ್ಮ ಹಿರಿತನದಿಂದ ಮಾರ್ಗದರ್ಶನ ನೀಡುತ್ತಾ ಬಂದರು. ಸರ್ಕಾರದ ಅನೇಕ ಜನಪರ ಯೋಜನೆಗಳಲ್ಲಿ ಪೂಜ್ಯರ ಪ್ರೇರಣೆ, ಮಾರ್ಗದರ್ಶನವಿದೆ.ಭಾರತದೇಶದಲ್ಲೆ ಶ್ರೇಷ್ಠ ಸೇವೆಯನ್ನು ಮಾಡಿದ ಮಠಾಧಿಪತಿ ಮತ್ತು ಶ್ರೀ ಮಠ ಎಂದು ಸಿದ್ಧಗಂಗ ಮಠ ಪ್ರಸಿದ್ಧವಾಯಿತು.
ಧರ್ಮಸ್ಥಳಕ್ಷೇತ್ರದ ಬಗ್ಯೆಅಪಾರವಾದ ಪ್ರೀತಿ ಮತ್ತು ಆಶೀರ್ವಾದವನ್ನಿತ್ತಿದ್ದ ಪೂಜ್ಯರು ಅನೇಕ ಬಾರಿಕ್ಷೇತ್ರಕ್ಕೆ ಭೇಟಿಕೊಟ್ಟಿರುವುದನ್ನುಇಲ್ಲಿ ಸ್ಮರಿಸಿ, ಅವರು ಖಂಡಿತವಾಗಿಯೂ ಸ್ವರ್ಗಾರೋಹಣ ಮಾಡಿದ್ದಾರೆ ಎಂಬ ಸ್ಮರಣೆಯೊಂದಿಗೆ ನನ್ನಗೌರವವನ್ನು ಸಲ್ಲಿಸುತ್ತೇನೆ.

(ಡಿ. ವೀರೇಂದ್ರ ಹೆಗ್ಗಡೆಯವರು)

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...