Tuesday, January 27, 2026

ಆರ್.ಎನ್. ಶೆಟ್ಟಿಯವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಸಂತಾಪ

ಆರ್.ಎನ್. ಶೆಟ್ಟಿಯವರ ನಿಧನದ ವಾರ್ತೆಯನ್ನು ತಿಳಿದು ವಿಷಾದವಾಯಿತು. ಅವರು ನಾನು ಮೆಚ್ಚಿದ ವ್ಯಕ್ತಿ. ಸಂಪಾದನೆ ಎರಡು ಕೈಯಲ್ಲಿ ಮಾಡಿ ನಾಲ್ಕು ಕೈಯಲ್ಲಿ ದಾನ ಮಾಡು ಎಂಬ ಮಾತಿನನ್ವಯದಂತೆ ಶೈಕ್ಷಣಿಕವಾಗಿ ಯಾವುದೇ ಪದವಿ ಪಡೆಯದಿದ್ದರೂ ಪ್ರಸಿದ್ಧರಾದ ಅವರು ಆಡಳಿತ ತರಬೇತಿದಾರರಿಗೆ ಶಿಕ್ಷಣ ಕೊಡುವಷ್ಟು ತಜ್ಞರಾಗಿದ್ದರು. ಅಂತೆಯೇ ಮುರ್ಡೇಶ್ವರ ಕ್ಷೇತ್ರವನ್ನು ಏಕಾಗ್ರತೆಯಿಂದ ಅಭಿವೃದ್ಧಿ ಪಡಿಸಿ ಎಲ್ಲರೂ ಒಮ್ಮೆ ವೀಕ್ಷಿಸಲೇ ಬೇಕಾದ ಪವಿತ್ರ ಕ್ಷೇತ್ರವಾಗಿ ಪರಿವರ್ತಿಸಿದರು.
ವ್ಯವಹಾರ, ಧಾರ್ಮಿಕತೆ ಎಲ್ಲಾ ರಂಗದಲ್ಲಿಯೂ ಯಶಸ್ಸು ಪಡೆದು ಮಾದರಿ ಅನ್ನಿಸಿಕೊಂಡಿದ್ದರು. ದಾನದಲ್ಲಿಯೂ ಎತ್ತಿದ ಕೈ. ಆದರೆ ಹೆಚ್ಚು ಪ್ರಚಾರ ಬಯಸದೆ ದಾನವನ್ನು ಮಾಡಿ ತಾನು ದಾನ ನೀಡಿದ ಕಾರ್ಯಗಳು ಅಥವಾ ಕಟ್ಟಡಗಳು ವ್ಯವಸ್ಥಿತವಾಗಿ ರೂಪುಗೊಂಡು ನಡೆಸುವಂತೆ ಮಾರ್ಗದರ್ಶನ ನೀಡುತ್ತಿದ್ದರು. ಆದರ್ಶ ಜೀವನವನ್ನು ನಡೆಸಿದ ಶ್ರೀ ಶೆಟ್ಟಿಯವರ ಜೀವನ ಇತರರಿಗೆ ಮಾದರಿ ಆಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.
ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮುರ್ಡೇಶ್ವರ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.

(ಡಿ. ವೀರೇಂದ್ರ ಹೆಗ್ಗಡೆಯವರು)

 

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...