Saturday, February 8, 2025

ಶಾಂತಿವನ ಟ್ರಸ್ಟ್: ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಪುರಸ್ಕಾರ ಸಮಾರಂಭ

ಉಜಿರೆ: ಹಿಂದೆ ನಮಗೆ ಆರ್ಥಿಕ ಬಡತನವಿದ್ದರೂ , ಸಾಂಸ್ಕೃತಿಕವಾಗಿ ಶ್ರೀಮಂತರಾಗಿದ್ದೆವು. ಆದರೆ ಈಗ ಆರ್ಥಿಕವಾಗಿ ಶ್ರೀಮಂತರಾಗಿದ್ದೇವೆ. ಸಾಂಸ್ಕೃತಿಕವಾಗಿ ಬಡವರಾಗಿದ್ದೇವೆ ಎಂದು ಹಾಸ್ಯ ಸಾಹಿತಿ ಎಚ್. ದುಂಡಿರಾಜ್ ಹೇಳಿದರು.
ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್‌ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಆಶ್ರಯದಲ್ಲಿ ಜ್ಞಾನ ಗಂಗೆ ಮತ್ತು ಜ್ಞಾನ ತುಂಗೆ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತರಿಗೆ ಪುರಸ್ಕಾರ ನೀಡುವ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.

ಸಹಜವಾಗಿ ಬರೆದರೆ ಕಾವ್ಯಮಯವಾಗುತ್ತದೆ. ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯವಾಗುತ್ತದೆ!
ಪ್ರಾಥಮಿಕ ಶಾಲಾ ಹಂತದಲ್ಲೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಓದುವ, ಬರೆಯುವ ಆಸಕ್ತಿ ಹೊಂದಿರಬೇಕು. ಪ್ರಾಸ, ರಾಗ, ತಾಳ, ಲಯದ ಬಗ್ಯೆ ತಿಳುವಳಿಕೆ ಇದ್ದರೆ ಸುಲಭದಲ್ಲಿ ಕವನಗಳನ್ನು, ಚುಟುಕಗಳನ್ನು ರಚಿಸಬಹುದು.
ಅಂಕಗಳಿಕೆ, ಉದ್ಯೋಗಕ್ಕಾಗಿ ಮಕ್ಕಳ ಮೇಲೆ ಒತ್ತಡ ಹಾಕಬಾರದು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಶಿಕ್ಷಕರು ಮತ್ತು ರಕ್ಷಕರು ಪ್ರೋತ್ಸಾಹ ನೀಡಬೇಕು. ನೈತಿಕ ಮೌಲ್ಯಾಧಾರಿತ ಪುಸ್ತಕಗಳ ವಿತರಣೆ ಮೂಲಕ ಹೆಗ್ಗಡೆಯವರು ಶಿಕ್ಷಣದ ಮೂಲಕ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸುತ್ತಿದ್ದಾರೆ. ಸರ್ಕಾರ ಮಾಡಬೇಕಾದ ಕಾರ್ಯವನ್ನು ಹೆಗ್ಗಡೆಯವರು ಮಾಡುತ್ತಿರವುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಸಿ ಹಂಚಿದರೆ ವನಮಹೋತ್ಸವ. ಖುಷಿ ಹಂಚಿದರೆ ಜೀವನ ಮಹೋತ್ಸ. ಆದುದರಿಂದ ಕಲೆ, ಸಂಸ್ಕೃತಿ ಮೂಲಕ ಖುಷಿ ಹಂಚೋಣ. ಶಾಂತಿ, ನೆಮ್ಮದಿಯ ಜೀವನ ನಡೆಸೋಣ ಎಂದು ಅವರು ಹಾರೈಸಿದರು.

       
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಿಕ್ಷಣದ ಮೂಲಕ ಜ್ಞಾನ ವೃದ್ಧಿಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಭವಿಷ್ಯವೇ ದೇಶದ ಭಾಗ್ಯವಾಗಿದೆ. ಕೆಟ್ಟ ಗುಣಗಳನ್ನು ತ್ಯಜಿಸಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಮಾನವರಾಗಬೇಕು. ವಿಶ್ವಮಾನವರಾಗಬೇಕು. ಶಿಕ್ಷಣದ ಜೊತೆಗೆ ಬದುಕಿನ ಪಾಠವನ್ನೂ ಕಲಿಯಬೇಕು ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು.
ಶ್ರದ್ಧಾ ಅಮಿತ್, ಭಾರತಿ ದುಂಡಿರಾಜ್, ಮತ್ತು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್ ಮತ್ತು ಚಂದ್ರಶೇಖರ ಕೆದಿಲಾಯ ಉಪಸ್ಥಿತರಿದ್ದರು.
ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಶಶಿಕಾಂತ ಜೈನ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಸಂಘಟಕ ಅಶೋಕ ಸಿ. ಪೂಜಾರಿ ಧನ್ಯವಾದವಿತ್ತರು. ಬಂಟ್ವಾಳದ ಸದಾಶಿವ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...