ಬಂಟ್ವಾಳ: ಬಂಟ್ವಾಳ ತಾ. ಸರಪಾಡಿ ರಾಜಯೋಗ ಸರಪಾಡಿ ಮತ್ತು ಸರಪಾಡಿ ಫ್ರೆಂಡ್ಸ್ ವತಿಯಿಂದ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಹೋರಾಟಗಾರ ಸರಪಾಡಿ ದಿ. ಎನ್. ಸುಬ್ಬಣ್ಣ ಶೆಟ್ಟಿ ಅವರ ಸ್ಮರಣಾರ್ಥ ಅವಿಭಜಿತ ದ.ಕ. ಮತ್ತು ಕಾಸರಗೋಡು ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪ್ರೊ ಮಾದರಿಯ ಮುಕ್ತ ಮತ್ತು 65 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಫೆ.1ರಂದು ಸರಪಾಡಿ ಪ್ರೌಢ ಶಾಲಾ ಮೈದಾನದಲ್ಲಿ ಜರಗಲಿದೆ.
ಸಂಜೆ ಪಂದ್ಯಾಟವನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿರುವರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಗ್ರಾ.ಪಂ.ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಸೇ.ಸ.ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಮತ್ತಿತರ ಗಣ್ಯರು ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರನ್ನು ಸಮ್ಮಾನಿಸಲಾಗುವುದು. ಸಮಾರೋಪದಲ್ಲಿ ಮಣಿನಾಲ್ಕೂರು ಸೇ.ಸ.ಸಂಘದ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಸುಧಾಕರ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಲಿರುವರು. ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಬಹುಮಾನ ವಿತರಿಸಲಿರುವರು ಎಂದು ಸಂಘಟಕ, ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ ಅವರು ತಿಳಿಸಿದ್ದಾರೆ.

