Thursday, February 13, 2025

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಮಾ. 18-22: ವರ್ಷಾವಧಿ ಜಾತ್ರೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ವರ್ಷಾವಽ ಜಾತ್ರೆ ಮತ್ತು ಉತ್ಸವಾದಿಗಳು ಮಾ.18 ರಿಂದ ಮಾ.22ರವರೆಗೆ ವರ್ಕಾಡಿ ದಿನೇಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ವೈದಿಕ-ವಿಧಿ-ವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಲಿರುವುದು.
ಮಾ.18 ರಂದು ಬೆಳಗ್ಗೆ ಗಣಹೋಮ, ಪ್ರಾರ್ಥನೆ, ತೋರಣ ಮುಹೂರ್ತ, ಮಧ್ಯಾಹ್ನ ಧ್ವಜಾರೋಹಣ, ಅನ್ನಸಂತರ್ಪಣೆ, ರಾತ್ರಿ ನಿತ್ಯಬಲಿ ಉತ್ಸವ, ತುಳು ಯಕ್ಷಗಾನ ಶ್ರೀ ಮಂಗಳಾದೇವಿ ಮೇಳದವರಿಂದ ಬಂಗಾರ್‍ದ ಕುರಾಲ್, ಮಾ.19 ಮಧ್ಯಾಹ್ನ ಪುಣ್ಯಾಹ ಕಲಶಾಭಿಷೇಕ, ರಾತ್ರಿ ನಿತ್ಯ ಬಲಿ, ಪಲ್ಲಕ್ಕಿ ಉತ್ಸವ, ರಾತ್ರಿ ಸರಪಾಡಿ ಅಗ್ರಹಾರದಲ್ಲಿರುವ ದೈವಂಗಳ ನೇಮ, ದೈವ-ದೇವರ ಭೇಟಿ, ಪಲ್ಲಕ್ಕಿಯಲ್ಲಿ ಬೀದಿ ಸವಾರಿ, ಮಾ.20 ಮಧ್ಯಾಹ್ನ ಅಂಕುರಪೂಜೆ, ರಥಕಲಶ, ರಾತ್ರಿ ಧರ್ಮ ದೈವ ಪಂಜುರ್ಲಿ ನೇಮೋತ್ಸವ, ನಡು ಬಲಿ ದರ್ಶನ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಚಂದ್ರ ಮಂಡಲೋತ್ಸವ, ಅಶ್ವತ್ಥ ಕಟ್ಟೆ ಪೂಜೆ, ಮಾ.21 ಬೆಳಗ್ಗೆ ಉತ್ಸವ, ವಿಶೇಷ ಚೆಂಡೆ ವಾದನ ಬಲಿ, ಶ್ರೀ ಮನ್ಮಹಾರಥಾರೋಹಣ, ರಾತ್ರಿ ಥಂಡರ್ ಗೈಸ್ ಫೌಂಡೇಷನ್ ಬಜ್ಪೆ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ , ಶಾಂತಿಗುಡ್ಡೆ ಧರ್ಮ ದೈವ ಶ್ರೀ ರಕ್ತೇಶ್ವರೀ ನೇಮೋತ್ಸವ, ರಾತ್ರಿ ವಲಸರಿ ಇಳಿಯುವುದು, ಮಹಾರಥೋತ್ಸವ, ಬಟ್ಟಲು ಕಾಣಿಕೆ, ಬಲಿ ಉತ್ಸವ, ದೇವರ ಶಯನ, ಕವಾಟ ಬಂಧನ, ಮಾ.22 ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ಶರಭೇಶ್ವರ ದೇವರ ದಿವ್ಯ ದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಚೂರ್ಣೋತ್ಸವ, ಪಲ್ಲಪೂಜೆ, ಸಂಜೆ ಕೋಡಿ ಕಲ್ಲುರ್ಟಿ ದೈವದ ಭಂಡಾರ ಬರುವುದು, ರಾತ್ರಿ ಕಲ್ಲುರ್ಟಿ ದೈವದ ನೇಮೋತ್ಸವ ಮತ್ತು ಓಕುಳಿ, ದೇವರ ಬಲಿ ಉತ್ಸವ , ನೇತ್ರಾವತಿ ನದಿಯಲ್ಲಿ ಅವಭೃತ ಸ್ನಾನ, ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಶರಭೇಶ್ವರ ದೇವರಿಗೆ ಹಾಗೂ ಶ್ರೀ ವೆಂಕಟರಮಣ ದೇವರಿಗೆ ಮಹಾಪೂಜೆ ಮತ್ತು ಕಲ್ಲುರ್ಟಿ ದೈವಕ್ಕೆ ಹರಕೆ ಒಪ್ಪಿಸುವುದು, ಧ್ವಜಾವರೋಹಣ, ಸಂಪ್ರೋಕ್ಷಣೆ, ಮಹಾಪೂಜೆ, ಮಹಾಮಂತ್ರಾಕ್ಷತೆಯೊಂದಿಗೆ ಮಂಗಳ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...