Friday, July 11, 2025

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ: ಎ.16 ರಿಂದ 19ರ ವರೆಗೆ ಅನುಜ್ಞಾ ಕಲಶ ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಎ. 16 ರಿಂದ 19ರ ವರೆಗೆ ಅನುಜ್ಞಾ ಕಲಶ ಬಾಲಾಲಯ ಪ್ರತಿಷ್ಠೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಕ್ಷೇತ್ರದ ಸಭಾಂಗಣದಲ್ಲಿ ಬಿಡುಗಡೆಗೊಂಡಿತು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ ಹಾಗೂ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಅವರು ಬಿಡುಗಡೆಗೊಳಿಸಿದರು. ಪುರೋಹಿತ ವಿಜಯಕೃಷ್ಣ ಐತಾಳ್ ಪೂಂಜೂರು ಅವರು ಪ್ರಾರ್ಥನೆ ನೆರವೇರಿಸಿದರು.
ಪುರೋಹಿತ ಗಣಪತಿ ಐತಾಳ್, ಅರ್ಚಕ ಜಯರಾಮ ಕಾರಂತ, ಕ್ಷೇತ್ರದ ಮೊಕ್ತೇಸರರಾದ ವಿಠಲ್ ಎಂ, ಉಮೇಶ್ ಆಳ್ವ ಕೊಟ್ಟುಂಜ, ಸುರೇಂದ್ರ ಪೈ, ಸಮಿತಿಯ ಉಪಾಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕೃಷ್ಣ ಪೂಜಾರಿ ಓಡದಡ್ಕ, ಕಾರ್ಯದರ್ಶಿಗಳಾದ ಅಶೋಕ ಶೆಟ್ಟಿ ಸರಪಾಡಿ, ಧನಂಜಯ ಶೆಟ್ಟಿ ನಾಡಬೆಟ್ಟು, ರಾಧಾಕೃಷ್ಣ ರೈ ಕೊಟ್ಟುಂಜ, ಪ್ರಕಾಶ್ಚಂದ್ರ ಆಳ್ವ ಪಿ, ಸಂತೋಷ್ ಶೆಟ್ಟಿ ಪಿ, ಸುಂದರ ಶೆಟ್ಟಿ ಎಚ್, ಶಶಿಕಾಂತ್ ಶೆಟ್ಟಿ ಆರುಮುಡಿ, ಲೋಕೇಶ್ ಆಚಾರ್ಯ, ಚಂದ್ರಹಾಸ ನಾಯ್ಕ್ ಬಲಯೂರು ಮೊದಲಾದವರಿದ್ದರು.
ಕಾರ್ಯಕ್ರಮಗಳು
ಎ. 16ರಂದು ಸಂಜೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹವನ, ವಾಸ್ತು ಬಲಿ, ಎ. 17 ರಂದು ಬೆಳಗ್ಗೆ ಗಣಪತಿ ಹವನ, ಮೂಲ ಬಿಂಬ ಶುದ್ಧಿ, ಆಶ್ಲೇಷಾ ಪೂಜೆ, ರುದ್ರಹವನ, ರುದ್ರಾಭಿಷೇಕ, ಸಂಜೆ ದುರ್ಗಾ ನಮಸ್ಕಾರ ಪೂಜೆ, ಎ. 18 ರಂದು ಬೆಳಗ್ಗೆ ಅನುಜ್ಞಾ ಕಲಶ, ಮೃತ್ಯುಂಜಯ ಹವನ ಜರಗಲಿದೆ.
ಎ. 19 ರಂದು ಬೆಳಗ್ಗೆ ಗಣಪತಿ ಹವನ, ಪ್ರತಿಷ್ಠಾ ಪ್ರಧಾನ ಹವನ, ಪರಿವಾರ ದೇವರುಗಳ ಪ್ರತಿಷ್ಠೆ, ಶ್ರೀ ದೇವರ ಪ್ರತಿಷ್ಠಾಪನೆ, ಜೀವ ಕಲಶಾಭಿಷೇಕ, ಪಂಚಾಮೃತಾಭಿಷೇಕ, ಚೈತನ್ಯ ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಬೆಳಗ್ಗೆ 11ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಹಾಗೂ ಬೆಳ್ಳೂರು ಶ್ರೀ ಶಂಕರನಾರಾಯಣ ದ್ವಾರಕನಾಥ ಗುರೂಜಿ ಬೆಂಗಳೂರು ಅವರು ಆಶೀರ್ವಚನ ನೀಡಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಉದ್ಯಮಿಗಳಾದ ಕೆ.ಡಿ.ಶೆಟ್ಟಿ ಚೆಲ್ಲಡ್ಕ, ಗಣಪತಿ ಸೋಮಯಾಜಿ, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು, ಡಾ| ಸತ್ಯಶಂಕರ್ ಶೆಟ್ಟಿ, ಡಾ| ಶಿವಪ್ರಸಾದ್ ಶೆಟ್ಟಿ, ಡಾ| ರಾಜಾರಾಮ್, ಉಷಾಲತಾ ಸರಪಾಡಿ, ಡಾ| ಭರತ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ಬಿ.ಸಿ.ರೋಡ್, ಶಶಿಧರ ಬಂಗೇರ ಪಟ್ಲಕೆರೆ ಭಾಗವಹಿಸಲಿದ್ದಾರೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...