Wednesday, July 9, 2025

ಸರಪಾಡಿ ಎಂ.ಆರ್.ಪಿ.ಎಲ್. ಡ್ಯಾಂಗೆ ಶಾಸಕ ರಾಜೇಶ್ ನಾಯ್ಕ್, ಎ.ಸಿ ರವಿಚಂದ್ರ ನಾಯ್ಕ್ ಭೇಟಿ

ಬಂಟ್ವಾಳ: ಸರಪಾಡಿ ಎಂ.ಆರ್.ಪಿ.ಎಲ್ . ಡ್ಯಾಂಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯ್ಕ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ನೆಕ್ಕಿಲಾಡಿ ಡ್ಯಾಂ ನಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಎಂ.ಆರ್.ಪಿ.ಎಲ್. ಡ್ಯಾಂ ನಲ್ಲಿ ನೀರಿನ ಮಟ್ಟ ಏರಿಕೆ ಯಾಗಿತ್ತು. ಆದರೆ ಮರಳು ತುಂಬಿದ್ದರಿಂದ ಡ್ಯಾಂ ನಿಂದ ನೀರು ಕೆಳಗೆ ಹರಿಯುತ್ತಿರಲಿಲ್ಲ.
ಸರಪಾಡಿ ಎ.ಎಂ.ಆರ್.ಪಿ.ಎಲ್. ಡ್ಯಾಂ ನ ಗೇಟ್ ಗಳು ಮರಳು ತುಂಬಿ ನೀರಿನ ಕೆಳ ಹರಿವಿಗೆ ತಡೆಯಾಗಿತ್ತು. ಹಾಗಾಗಿ ಡ್ರಜ್ಜಿಂಗ್ ಮೆಷಿನ್ ಬಳಸಿ ಮರಳು ತೆಗೆಯುವ ಕೆಲಸ ಇಲ್ಲಿ ಪ್ರಾರಂಭಿಸಿದರು. ಈ ಕಾಮಗಾರಿಯನ್ನು ಶಾಸಕ ರಾಜೇಶ್ ನಾಯ್ಕ್ ವೀಕ್ಷಿಸಿದರು.
ಸರಪಾಡಿಯಿಂದ ತುಂಬೆ ಡ್ಯಾಂ ವರೆಗೆ ಹಿಂದಿನ ಕಾಲದ ಬೋಟ್ ವೇ ಇದ್ದು , ಆ ದಾರಿಯ ಮೂಲಕ ಎ.ಎಂ.ಆರ್.ಪಿ.ಎಲ್ ಡ್ಯಾಂ ನಲ್ಲಿ ದಾಸ್ತಾನು ಇರುವ ನೀರು ನೇರವಾಗಿ ತುಂಬೆ ಡ್ಯಾಂ ನವರೆಗೆ ಮುಟ್ಟುತ್ತದೆ.

ನೀರು ಹರಿಯಲು ಕೆಲವೊಂದು ಕಡೆಗಳಲ್ಲಿ ಕಲ್ಲು ಅಥವಾ ಮರಳು ತಡೆಯಾದರೆ ಅದನ್ನು ತೆರವುಗೊಳಿಸುವ ಕೆಲಸ ಮಾಡಲು ಪುರಸಭಾ ಇಲಾಖಾ ಅಧಿಕಾರಿಗಳಿಗೆ ಸೂಚನೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನರಿಗೆ ಈ ವರೆಗೆ ಕುಡಿಯುವ ನೀರಿನ ಸಮಸ್ಯೆ ಆಗಿಲ್ಲ, ಮುಂದಿನ ಒಂದು ತಿಂಗಳ ವರೆಗೆ ಬೇಕಾಗುವ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ನದಿಯಲ್ಲಿ ಅಲ್ಲಲ್ಲಿ ನಿಂತಿರುವ ನೀರನ್ನು ಪಂಪ್ ಮೂಲಕ ಮೇಲಕ್ಕೆ ಎತ್ತಿ , ಜಾಕ್ ವೆಲ್ ಗೆ ಹಾಕಲಾಗುತ್ತದೆ.‌ ಆ ಮೂಲಕ ನೀರನ್ನು ಪುರಸಭೆಯು ಜನರಿಗೆ ಶುದ್ದೀಕರಣ ಮಾಡಿ ನೀಡುತ್ತಿದೆ.
ಇನ್ನೂ ಒಂದು ತಿಂಗಳು ಮಳೆ ಬಾರದಿದ್ದರೂ ಜನರಿಗೆ ತೊಂದರೆ ಯಾಗದ ರೀತಿಯಲ್ಲಿ ನೀರು ನೀಡುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಎ.ಸಿ.ರವಿಚಂದ್ರನಾಯಕ್, ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ‌ಸೋಜ, ಇಂಜಿನಿಯರ್ ಡೊಮಿನಿಕ್ ಡಿ.ಮೆಲ್ಲೊ, ಪುರಸಭಾ ಸದಸ್ಯ ಗೋವಿಂದ ಪ್ರಭು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ರಮಾನಾಥ ರಾಯಿ, ಪವನ್ ಕುಮಾರ್ ಶೆಟ್ಟಿ, ಮಂಜು ಮತ್ತಿತರರು ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...