Saturday, July 12, 2025

ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಪ್ರಾರಂಭಗೊಂಡ ಸ್ಥಳ ಶ್ರೀರಾಮ ಮಂದಿರಕ್ಕೆ ಶ್ರೀರಾಮ ವಿದ್ಯಾಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ತೆರಳಿ ಸರಸ್ವತೀ ಪೂಜೆ ಮಾಡಿದರು.

     

ಎಲ್ಲರೂ ಸರಸ್ವತೀ ಮಾತೆಯ ಭಾವಚಿತ್ರ ಹಾಗೂ ಹರಿವಾಣದಲ್ಲಿ ಹೂ ಹಿಡಿದುಕೊಂಡು ವಿದ್ಯಾಕೇಂದ್ರದಿಂದ ಸಾಲಾಗಿ ಶಿಸ್ತುಬದ್ದವಾಗಿ ಶ್ರೀರಾಮ ಮಂದಿರಕ್ಕೆ ತೆರಳಿದರು. ಮಂದಿರದಲ್ಲಿ ವಿದ್ಯಾರ್ಥಿಗಳು ಪೂಜೆ ನಡೆಸಲೆಂದೇ ವಿಶಾಲವಾದ ಚಪ್ಪರದ ವ್ಯವಸ್ಥೆ ಮಾಡಲಾಗಿತ್ತು. ಶಿಶುಮಂದಿರದಿಂದ ಪದವಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ತಮ್ಮಲ್ಲಿನ ಸರಸ್ವತೀ ಭಾವಚಿತ್ರವನ್ನು ತಮ್ಮ ಮುಂಭಾಗದಲ್ಲಿ ಜೋಡಿಸಿ ಕುಳಿತು ಸರಸ್ವತೀ ಮಂತ್ರವನ್ನು ಸಾಮೂಹಿಕವಾಗಿ ಪಠಿಸಿದರು. ಪುರೋಹಿತರಾದ ಕಶೆಕೋಡಿ ಸೂರ್‍ಯನಾರಾಯಣ ಭಟ್‌ ಇವರು ಪೂಜಾ ವಿಧಾನವನ್ನು ತಿಳಿಸುದುದಲ್ಲದೇ ಪೂಜೆಯ ಮಹತ್ವವನ್ನು ತಿಳಿಸಿದರು.
ಸಭಾಕಾರ್‍ಯಕ್ರಮದಲ್ಲಿ ರಾಮಕೃಷ್ಣ ಮಠ ಮಂಗಳೂರು ಇಲ್ಲಿನ ಸ್ವಾಮೀಜಿಗಳಾದ ಶ್ರೀ ಏಕಗಮ್ಯಾನಂದಜೀ ಇವರು ಸರಸ್ವತೀ ಮಾತೆಯ ವಿಶೇಷತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...