Wednesday, January 28, 2026

*ತಾಲೂಕು ಮಟ್ಟದ ಕವಿ ಸರ್ವಜ್ಞ ಜಯಂತಿ ಆಚರಣೆ*

ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆಯನ್ನು‌‌ ತಾಲೂಕು ಮಟ್ಟದ ಆಚರಣಾ ಸಮಿತಿ ವತಿಯಿಂದ ಇಂದು ಶನಿವಾರ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

‌ಆಡು ಮಾತಿನಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಅವಿದ್ಯಾವಂತರಾದದರೂ‌ ಎಲ್ಲ ಜನರನ್ನೂ ಒಂದೇ ದೃಷ್ಟಿಯಿಂದ ನೋಡಿ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು  ಪ್ರಯತ್ನಿಸಿದರು ಎಂದು ರಾಜ್ಯ ಕುಲಾಲ ಕುಂಬಾರರ ಮಹಿಳಾ ಸಂಘದ ಅಧ್ಯಕ್ಷರಾದ ಭಾರತಿ ಸೇಸಪ್ಪ ಹೇಳಿದರರು.

ಈ ಸಂದರ್ಭದಲ್ಲಿ ಹರಿಪ್ರಸಾದ್ ಪುರಸಭೆ ಸದಸ್ಯರು,

ಮತಿ ಶೋಭಾ ಹರಿಶ್ಚಂದ್ರ ಪುರಸಭೆ ಸದಸ್ಯರು, ಸುಂದರ್ .ಬಿ ಅಧ್ಯಕ್ಷರು ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ, ಪದ್ಮನಾಭ ‌ವಿಟ್ಲ ಉಪಾಧ್ಯಕ್ಷರು ಸಮಾಜ ಸೇವಾ ಸಹಕಾರಿ ಬ್ಯಾಂಕ್, ಸುಕುಮಾರ್ ಬಂಟ್ವಾಳ ಗೌರವ ಅಧ್ಯಕ್ಷರು,

ಪುನೀತ್ ಎಸ್ ಮೈರಾನ್ ಪಾದೆ ಹಾಗೂ ಕುಲಾಲ ಸಂಘದ ಪ್ರಮುಖರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಶು ಕುಮಾರ್

ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

ಜನಾರ್ದನ ಬಂಟ್ವಾಳ್ ಸ್ವಾಗತಿಸಿ

ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ವಂದಿಸಿದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...