Thursday, February 13, 2025

ಎ.21 ರಂದು ಶ್ರೀ ಸತ್ಯಸಾಯಿ ಆರಾಧನಾ ಮಹೋತ್ಸವ ಹಾಗೂ ಶ್ರೀ ಸಾಯಿ ನಿಕೇತನ ಸೇವಾಶ್ರಮ ಕಟ್ಟಡದ ವಿಸ್ತರಿಸಿದ ಭಾಗದ ಅನಾವರಣ

ಶ್ರೀ ಸತ್ಯಸಾಯಿ ಸೇವಾ ಪ್ರತಿಷ್ಠಾನ, ದೈಗೋಳಿ ಕುಡ್ಲಮುಗೇರು ಮಂಜೇಶ್ವರ ವತಿಯಿಂದ ಶ್ರೀ ಸತ್ಯಸಾಯಿ ಆರಾಧನಾ ಮಹೋತ್ಸವ ಹಾಗೂ ಶ್ರೀ ಸಾಯಿ ನಿಕೇತನ ಸೇವಾಶ್ರಮ ಕಟ್ಟಡದ ವಿಸ್ತರಿಸಿದ ಭಾಗದ ಅನಾವರಣ ಎ.21 ರಂದು ಆದಿತ್ಯವಾರ 9 ಗಂಟೆಗೆ ಸಾಯಿ ನಿಕೇತನ ಸೇವಾಶ್ರಮ ದೈಗೋಳಿಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಾಗೂ 9.30 ರಿಂದ ಶ್ರೀ ಸತ್ಯನಾರಾಯಣ ಪೂಜೆ ವೇದಮೂರ್ತಿ ಶ್ರೀ ರಾಮ ಭಟ್ಟ ಬೋಳಂತಕೋಡಿ ಅವರಿಂದ ಸಭಾ ಕಾರ್ಯಕ್ರಮ ಬೆಳಿಗ್ಗೆ 9.30ರಿಂದ ಯು.ಗಂಗಾಧರ ಭಟ್ ಅವರ ಅಧ್ಯಕ್ಷತೆಯಲ್ಲಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರಿ ಯೋಗಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಅಪರಾಹ್ನ 2 ರಿಂದ ಕೋಳೂರು ಹವ್ಯಾಸಿ ಯಕ್ಷ ಬಳಗದವರಿಂದ “ಸುಧನ್ವ ಮೋಕ್ಷ-ವೀರವರ್ಮ ಕಾಳಗ” ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...