Friday, July 4, 2025

ಇಸ್ಲಾಮ್ ಸಂಪ್ರದಾಯದತೆ ದಫನ ಮಾಡಿದ ಹಿಂದು ವ್ಯಕ್ತಿಯ ಮೃತದೇಹದ ಅವಶೇಷ ಹೊರ ತೆಗೆದು ತವರಿಗೆ ತರಲು ಕೋರ್ಟ್ ಸೂಚನೆ

ದೆಹಲಿ: ಸೌದಿ ಅರೇಬಿಯಾದಲ್ಲಿನ ಜಿದ್ದಾ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಮಾಡಿದ ಎಡವಟ್ಟಿನಿಂದಾಗಿ ಹಿಂದು ವ್ಯಕ್ತಿಯೊಬ್ಬರ ಮೃತದೇಹವನ್ನು ಇಸ್ಲಾಮ್ ಸಂಪ್ರದಾಯದತೆ ದಫನ ಮಾಡಿದ್ದು ಇದೀಗ ಮೃತದೇಹದ ಅವಶೇಷಗಳನ್ನು ಹೊರ ತೆಗೆದು ಭಾರತಕ್ಕೆ ತರುವಂತೆ ದಿಲ್ಲಿ ಹೈಕೋರ್ಟ್ ಭಾರತ ಸರಕಾರಕ್ಕೆ ಸೂಚಿಸಿದೆ.

ಸೌದಿ ಅರೇಬಿಯಾದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ಸಂಜೀವ್ ಕುಮಾರ್ ಜನವರಿ 24ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಅಲ್ಲಿನ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಇರಿಸಲಾಗಿತ್ತು. ಆದರೆ ಅಚ್ಚರಿಯೆಂಬತೆ ಫೆಬ್ರವರಿ 18ರಂದು ಮೃತದೇಹವನ್ನು ಇಸ್ಲಾಮ್ ಸಂಪ್ರದಾಯದAತೆ ದಫನ ಮಾಡಲಾಗಿತ್ತು. ಇದಕ್ಕೆ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಮಾಡಿದ ಎಡವಟ್ಟು ಕಾರಣವಾಗಿದೆ.

ರಾಯಭಾರ ಕಚೇರಿ ಸಿಬ್ಬಂದಿ ಮೃತರ ಮರಣ ದಾಖಲೆ ಪತ್ರದ ಧರ್ಮ ಕಾಲಂನಲ್ಲಿ ಮುಸ್ಲಿಮ್ ಎಂದು ತಪ್ಪಾಗಿ ಉಲ್ಲೇಖಿಸಿದ್ದರಿಂದಾಗಿ ಮೃತದೇಹವನ್ನು ಸೌದಿಯಲ್ಲೇ ಇಸ್ಲಾಮ್ ಸಂಪ್ರದಾಯದತೆ ದಫನ ನಡೆಸಲಾಗಿತ್ತು. ಈ ಬಗ್ಗೆ ಮೃತರ ಪತ್ನಿ ಅಂಜು ಶರ್ಮಾ ಅವರಿಗೆ ರಾಯಭಾರ ಕಚೇರಿಯಿಂದ ತಮ್ಮ ಪ್ರಮಾದಕ್ಕಾಗಿ ಕ್ಷಮಾಪಣಾ ಪತ್ರವನ್ನೂ ಕಳುಹಿಸಲಾಗಿದೆ. .

ಆದರೆ ಮೃತರ ಪತ್ನಿ ಅಂಜು ಶರ್ಮಾ ಪತಿಯ ಮೃತದೇಹಕ್ಕಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಮೃತದೇಹದ ಅಂತಿಮ ಸಂಸ್ಕಾರ ನಡೆಸಲು ಅನುಮತಿ ಪತ್ರ ನೀಡಿರಲಿಲ್ಲ. ಹೀಗಿರುವಾಗ ಸೌದಿಯಲ್ಲಿನ ಸ್ಥಳೀಯ ಪ್ರಾಧಿಕಾರಕ್ಕೆ ಮೃತದೇಹದ ಅವಶೇಷಗಳನ್ನು ಹೊರ ತೆಗೆದು ಅದನ್ನು ಭಾರತಕ್ಕೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಅರ್ಜಿಯಲ್ಲಿ ಕೋರಿದ್ದರು.

ಅರ್ಜಿ ಆಲಿಸಿದ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರದ ವಿವರಣೆ ಕೇಳಿತ್ತು. ಹೈಕೋರ್ಟಿಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ, ಸೌದಿ ಸ್ಥಳೀಯ ಆಡಳಿತ ಸಂಜೀವ್ ಕುಮಾರ್ ಅವರ ಮೃತದೇಹ ದಫನಗೈದ ಸ್ಥಳವನ್ನು ಪತ್ತೆ ಹಚ್ಚಿದೆ ಎಂದು ಕೋರ್ಟಿಗೆ ತಿಳಿಸಿದೆ. ಮಾತ್ರವಲ್ಲದೆ ಜಿದ್ದಾದ ಭಾರತೀಯ ರಾಯಭಾರ ಕಚೇರಿಯು ಮೃತದೇಹದ ಅವಶೇಷಗಳನ್ನು ಹೊರತೆಗೆದು ಭಾರತಕ್ಕೆ ಕಳುಹಿಸುವ ಪ್ರಕ್ರಿಯೆಯನ್ನು ಅಲ್ಲಿನ ನ್ಯಾಯಾಲಯದಲ್ಲಿ ನಡೆಸುತ್ತಿದೆ ಎಂದು ತಿಳಿಸಿದೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...