Friday, June 27, 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಿಂದ 5 ಲಕ್ಷ ತುರ್ತು ಸಾಲ

ಮಂಗಳೂರು: ಬ್ಯಾಂಕ್ ಗಳಲ್ಲಿ ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್.ಬಿ.ಐ.) ತನ್ನ ‘ಎಸ್‌ಬಿಐ ತುರ್ತು ಸಾಲ ಯೋಜನೆ’ ಅಡಿಯಲ್ಲಿ ತನ್ನ ಗ್ರಾಹಕರಿಗೆ 45 ನಿಮಿಷಗಳಲ್ಲಿ 5 ಲಕ್ಷ ರುಪಾಯಿವರೆಗೆ ಸಾಲವನ್ನು ನೀಡಲಿದೆ. ಸಾಲ ತೆಗೆದುಕೊಂಡು 6 ತಿಂಗಳ ಬಳಿಕ ಇ.ಎಂ.ಐ. ಪ್ರಾರಂಭ ಮಾಡಲಾಗುತ್ತದೆ.
ಎಸ್‌.ಬಿ.ಐ.ನ ಈ ತುರ್ತು ಸಾಲ ಯೋಜನೆ ಅಡಿಯಲ್ಲಿ ಸಾಲ ಪಡೆದವರು, ಸಾಲ ಅನುಮೋದಿಸಿದ ಆರು ತಿಂಗಳ ನಂತರ ಸಮನಾದ ಮಾಸಿಕ ಕಂತುಗಳನ್ನು ಪಾವತಿಸಬೇಕಾಗುತ್ತದೆ. ಅಂದರೆ ನಿಮ್ಮ ಇಎಂಐ ಸಾಲ ಪಡೆದು ಆರು ತಿಂಗಳ ಬಳಿಕ ಶುರುವಾಗಲಿದೆ.

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿರುವ ಗ್ರಾಹಕರಿಗೆ ಈ ತುರ್ತು ಸಾಲ ಯೋಜನೆಯಿಂದ ಸಹಾಯವಾಗುತ್ತದೆ.

ಎಸ್‌.ಬಿ.ಐ. ನ ತುರ್ತು ಸಾಲ ಯೋಜನೆಯು 10.5 ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ ಮತ್ತು ಸಾಲದ ಇ.ಎಂ.ಐ. ಆರು ತಿಂಗಳ ನಂತರ ಪ್ರಾರಂಭವಾಗಲಿದೆ. ಇದು ಇತರ ವೈಯಕ್ತಿಕ ಸಾಲಗಳಿಗೆ ಹೋಲಿಸಿದರೆ ಉತ್ತಮವಾಗಿದೆ.
ನೀವು ಸಾಲ ಪಡೆಯಲು ಅರ್ಹರೆಂದು ತಿಳಿಯಲು ಪ್ರಥಮವಾಗಿ ಎಸ್.ಎಂ.ಎಸ್. ಮಾಡಬೇಕು. ನಿಮ್ಮ ಮೊಬೈಲ್‌ನಲ್ಲಿ ‘PAPL’ ಎಂದು ಟೈಪ್‌ ಮಾಡಿ ನಿಮ್ಮ ಎಸ್‌.ಬಿ ಐ. ಅಕೌಂಟ್ ನಂಬರ್‌ನ ಕೊನೆಯ ನಾಲ್ಕು ಸಂಖ್ಯೆಗಳನ್ನು ಟೈಪ್‌ ಮಾಡಿ 567676 ಗೆ ಕಳುಹಿಸುವ ಮೂಲಕ ನೀವು ಈ ಸಾಲ ಯೋಜನೆಯ ಅರ್ಹತೆಯನ್ನು ಪರಿಶೀಲಿಸಬಹುದು ಮಾಡಬೇಕು. ಆನ್‌ಲೈನ್‌ನಲ್ಲಿ ಅಥವಾ ಎಸ್‌.ಬಿ.ಐ. ನ ಯೋನೊ ಆಪ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ನೀವು ಈ ತುರ್ತು ಸಾಲ ಯೋಜನೆಯನ್ನು ಪಡೆಯಬಹುದು. ನೀವು ಸಾಲಕ್ಕೆ ಅರ್ಹರಾಗಿದ್ದರೆ ಎಸ್‌ಬಿಐ ನಿಮ್ಮ ಎಸ್‌ಎಂಎಸ್‌ಗೆ ಪ್ರತಿಕ್ರಿಯಿಸುತ್ತದೆ. ಜೊತೆಗೆ ಕೆಲವು ನಿಯಮಗಳು ಕೂಡ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸುವ ವಿಧಾನ
ಎಸ್‌ಬಿಐ ತುರ್ತು ಸಾಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ

– ಯೋನೊ ಎಸ್‌ಬಿಐ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ‘ಪೂರ್ವ-ಅನುಮೋದಿತ ಸಾಲ’ ಕ್ಲಿಕ್ ಮಾಡಿ.

– ಅಧಿಕಾರಾವಧಿ ಮತ್ತು ಸಾಲದ ಮೊತ್ತವನ್ನು ಸೆಲೆಕ್ಟ್ ಮಾಡಿ.

– ನಿಮ್ಮ ಖಾತೆಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುವುದು ಮತ್ತು ನೀವು ಅದನ್ನು ಸಲ್ಲಿಸಬೇಕು.

– ಎಸ್‌ಬಿಐ ತುರ್ತು ಸಾಲದ ಮೊತ್ತವನ್ನು ತಕ್ಷಣ ನಿಮ್ಮ ಎಸ್‌ಬಿಐ ಉಳಿತಾಯ ಖಾತೆಗೆ ಜಮಾ ಮಾಡಲಾಗುತ್ತದೆ.

ಈ ಪ್ರಕ್ರಿಯೆಯು ಎಲ್ಲವೂ ಸರಿಯಾಗಿ ನಡೆದರೆ 45 ನಿಮಿಷಗಳಲ್ಲಿ 5 ಲಕ್ಷ ರುಪಾಯಿವರೆಗೆ ಸಾಲವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಎಸ್.ಬಿ. ಐ. ಮೂಲಗಳು ತಿಳಿಸಿವೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...