Sunday, June 29, 2025

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿಂದ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಬಾರ್ಡ್ ಸಹಯೋಗದಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ಬಂಟ್ವಾಳ ಶಾಖಾ ಕಛೇರಿಯಲ್ಲಿ ನಡೆಯಿತು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪನಾ ನಿರ್ದೇಶಕರಾದ ನಾರಾಯಣ ಕಾಮತ್ ರವರು ಮಾತನಾಡಿ ನಮ್ಮ ಬ್ಯಾಂಕಿನ ಗ್ರಾಹಕರೊಂದಿಗೆ ಉತ್ತಮ ಬಾಂಧ್ಯವ್ಯ ಹೊಂದಿದೆ. ಈಗಾಗಲೇ ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಮತ್ತು ಕೋರ್‍ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಮುಂದಿನ ದಿನಗಳಲ್ಲಿ ಇಂಟರ್‍ ನೆಟ್ ಬ್ಯಾಂಕಿಗ್ ವ್ಯವಸ್ಥೆ ಬರಲಿದೆ. ಎಲ್ಲರೂ ಆಪ್ ಮೂಲಕ ಮೊಬೈಲ್ ನಲ್ಲಿ ವ್ಯವಹಾರ ಮಾಟಬಹುದಾಗಿದೆ, ಹಾಗೂ ಮಹಿಳೆಯರಿಗೆ ನವೋದಯ ಸ್ಯ-ಸಹಾಯ ಸಂಘಗಳ ಬಗ್ಗೆ ಹಾಗೂ ಕೃಷಿಕರಿಗೆ ನಬಾರ್ಡ್ ಸಹಯೋಗದೋಂದಿಗೆ ಸಾಲಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.
ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಶಿವಪ್ರಸಾದ್ ರವರು ಮಾತನಾಡಿ ಬ್ಯಾಂಕ್ ಗ್ರಾಹಕರೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ. ತಮ್ಮ ಆರ್ಥಿಕ ಅಭಿವೃದ್ಧಿಗೆ ಬ್ಯಾಂಕ್ ಸದಾ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು ಮತ್ತು ಬ್ಯಾಂಕಿನ ವಸೂತಿದಳದ ಸಂತೋಷ್ ಕುಮಾರ್‍ ಶೆಟ್ಟಿ ಯವರು ಬ್ಯಾಂಕಿನ ವರದಿಯನ್ನು ಓದಿ ಹೇಳಿದರು. ಹಾಗೂ ಮುಖ್ಯ ಅಥಿತಿ ಗಳಾಗಿ ಬಂಟ್ವಾಳ ವಲಯ ಮೇಲ್ವಿಚಾರಕರಾದ ಕೇಶವ ಕಿಣಿ ಮತ್ತು ವಿಟ್ಲ ವಲಯದ ಯೊಗೀಶ್ ರವರು ಉಪಸ್ಥಿತರಿದ್ದರು. ಶಾಖೆಯ ಸೀಮಾರವರು ಸ್ವಾಗತಿಸಿದರು, ಹಾಗೂ ಶೇಖ್ ಮೊಹಮ್ಮದ್ ನವೀದ್ ರವರು ವಂದಿಸಿದರು. ನವೋದಯ ಟ್ರಸ್ಟ್ ನ ಶೋಭಾರವರು ಕಾರ್ಯಕ್ರಮ ನಿರೂಪಿಸಿದರು.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...