Thursday, June 26, 2025

ಗ್ರಾಮೀಣ ಪ್ರದೇಶದ ಶಾಲೆಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಅವಕಾಶ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಕೃತಿಯ ಜೊತೆ ಬೆರೆಯುವ ಅವಕಾಶ ಪಡೆದಿದ್ದು, ಹೆಚ್ಚು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವಕಾಲೇಜಿನ 67 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ಹಾಗೂ ಒಟ್ಟು 1.25 ಕೋಟಿ ವೆಚ್ಚದ ವಿವಿಧ ಕಾಮಾರಿಗಳ ಉದ್ಘಾಟಿಸಿ ಬಳಿಕ ನಡೆದ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪುಣ್ಯವಂತರು ಮತ್ತು ಬಹಳಷ್ಟು ಸಾಧನೆ ಮಾಡಲು ಅವಕಾಶ ಸಿಕ್ಕಿದೆ.

ಗ್ರಾಮೀಣ ಭಾಗದ ಜನತೆ ಈ ಕಾಲೇಜಿನ  ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ.  ಶಾಸಕನಾಗಿ ನಾನು ಈ ಭಾಗದ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂಬ ಭರವಸೆ ನೀಡಿದರು.

ಮೂವತ್ತು ವರ್ಷ ಗಳ ಬಳಿಕ ಹೊಸ ಕಟ್ಟಡದಲ್ಲಿ ಕಾಲೇಜು ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ಪಡೆದಿರುವುದು ಸಂತಸ ತಂದಿದೆ.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ  ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಕಾಲೇಜು ಸಮಿತಿ ಸದಸ್ಯ ಸಂದರ್ಶನ ಬಜ, ಧರಣೇಂದ್ರ ಜೈನ್, , ಗ್ರಾ.ಪಂ ಸದಸ್ಯ ರಾದ ರಾಮಕೃಷ್ಣ ಮಯ್ಯ, ಗೀತಾ, ಶಾಂತಪ್ಪ ಪೂಜಾರಿ , ಧನಂಜಯ ಸರಪಾಡಿ, ದಯಾನಂದ ನಾಯ್ಕ, ಜಿ ಎಮ್. ಫಾರೂಕ್, ಚಿದಾನಂದ ರೈ, ಪುರುಷೋತ್ತಮ ಮಜಲು, ಸರೋಜಿನಿ, ದಿನೇಶ್ ಗೌಡ, ಪಿ.ಡಬ್ಲೂ.ಡಿ.ಇಂಜಿನಿಯರ್ ಅಮೃತ್ ಕುಮಾರ್, ಉದ್ಯಮಿ ಜಯಪ್ರಕಾಶ್, ಸ್ಟೇಟ್ಸ್ ಕಂಪೆನಿ ಯ , ಎಚ್.ಆರ್.ಅಫೀಸರ್ ಭರತ್, ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕಾರ್ಯದರ್ಶಿ ರಮನಾಥ ರಾಯಿ, ಪ್ರಮುಖರಾದ ರವೀಂದ್ರ ಶೆಟ್ಟಿ ಕಯ್ಯಾಳ, ನಾಗೇಶ್ ಅಗರಗಂಡಿ, ಮತ್ತಿತರ ರು ಉಪಸ್ಥಿತರಿದ್ದರು.

ಸಮಿತಿ ಉಪಾಧ್ಯಕ್ಷ ಪೂವಪ್ಪ ಪೂಜಾರಿ ಕಡಂಬಾಜೆ ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಪ್ರಾಂಶುಪಾಲೆ ಸ್ಮಿತಾ ಸ್ವಾಗತಿಸಿದರು. ಉಪನ್ಯಾಸಕಿ ಅಮೃತ ಕೊಡಿಯಾಲ್ ಬೈಲು, ಉಪನ್ಯಾಸಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...