Sunday, June 29, 2025

ಕೊರೊನಾ ನಿಯಮಾವಳಿಗಳಂತೆ ಶಾಲೆಗಳು ನಡೆಯುತ್ತಿದೆಯಾ? ಲೋಕಾಯುಕ್ತ ಅಧಿಕಾರಿಗಳ ತಂಡ ಶಾಲೆಗಳಿಗೆ ಭೇಟಿ

ಬಂಟ್ವಾಳ: ಕೊರೊನಾ ನಿಯಮಾವಳಿಯಂತೆ ಶಾಲೆಯು ನಿಯಮಿತವಾಗಿ ನಡೆಯುತ್ತಿದೆಯೆಂದು ಪರೀಕ್ಷಿಸಲು ಲೋಕಾಯುಕ್ತ ಅಧೀಕ್ಷಕ ಕುಮಾರಸ್ವಾಮಿ ಮತ್ತು ಅವರ ತಂಡ ಬಂಟ್ವಾಳ ತಾಲೂಕಿನ ಪೊಳಲಿ, ಕಳ್ಳಿಗೆ ಕೊಡ್ಮಾಣ್ ಹಾಗೂ ಸುಜೀರ್ ಸರಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿದರು.

ಪೊಳಲಿ ಶಾಲೆಯಲ್ಲಿ ಕೊರೋನಾದ ಸೂಚನಾ ನಿಯಮಾವಳಿಗಳನ್ನು ಶಿಸ್ತಿನಿಂದ ಪಾಲಿಸಿದನ್ನು ಪ್ರಶಂಶಿಸಿದರು ಹಾಗೆಯೇ ಅಲ್ಲಲ್ಲಿ ಪ್ರದರ್ಶಿಸಿದ ಕೋರೋಣ ಜಾಗೃತಿ ಭಿತ್ತಿಪತ್ರವನ್ನು ಶೌಚಾಲಯ ಸ್ವಚ್ಛತೆ ಮತ್ತು ವಿದ್ಯಾರ್ಥಿಗಳ ಶಿಸ್ತು ಹಾಗೂ ಶಿಕ್ಷಕರ ಕಾರ್ಯವೈಖರಿಯನ್ನು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜು, ಲೋಕಾಯುಕ್ತ ನಿರೀಕ್ಷಕರಾದ ಅಮನುಲ್ಲಾ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸುಕುಮಾರ್ ಕಾಡಿನ ಕೊಂಡ ಉಪಸ್ಥಿತರಿದ್ದರು.

ಈ ಶಾಲೆಯು ಇನ್ನಿತರ ಖಾಸಗಿ ಶಾಲೆಯಂತೆ ಕಾರ್ಯನಿರ್ವಹಿಸುತ್ತಿರುವುದನ್ನು ಮತ್ತು ವಿದ್ಯಾರ್ಥಿಗಳ ದಾಖಲಾತಿಯನ್ನು ನೋಡಿ ಲೋಕಾಯುಕ್ತ ಅಧೀಕ್ಷಕರಾದ ಕುಮಾರಸ್ವಾಮಿಯವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಇದನ್ನು ಮುಂದುವರಿಸುವಂತೆ ಶಿಕ್ಷಕರಿಗೆ ಪ್ರೇರಣೆಯ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...