Saturday, January 31, 2026

ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ : ಈಗಾಗಲೇ ಜಾರಿಯಲ್ಲಿರುವ ಅನ್ ಲಾಕ್-5ರ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ತರದೆ ಆ ಮಾರ್ಗಸೂಚಿಯನ್ನೇ ನವೆಂಬರ್ 30 ರವರೆಗೆ ಕೇಂದ್ರ ಗೃಹ ಸಚಿವಾಲಯ ವಿಸ್ತರಿಸಿದೆ. ಆದರೆ ಶಾಲೆ ಕಾಲೇಜುಗಳಿಗೆ ಹೊಸ ಶಿಕ್ಷಣಸಂಸ್ಥೆಗಳಿಗೆ ಮಾತ್ರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಹೊಸ ಮಾರ್ಗಸೂಚಿಯ ಅನ್ವಯ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶಾಲೆಗಳು ಹಾಗೂ ಇತರ ಕಾಲೇಜುಗಳನ್ನು ಮತ್ತೆ ಆರಂಭ ಮಾಡುವ ಅಧಿಕಾರವನ್ನು ನೀಡಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆನ್‌ಲೈನ್‌ ತರಗತಿಗಳನ್ನು ಅಧಿಕಗೊಳಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಶಾಲೆಗೆ ಹೋಗದಿರುವ ಆಯ್ಕೆಯನ್ನು ನೀಡಲಾಗಿದೆ.
ವಿದ್ಯಾರ್ಥಿಗಳು ಶಾಲೆಗೆ ತೆರಳುವ ನಿರ್ಧಾರವನ್ನು ಕೈಗೊಂಡಲ್ಲಿ ಹೆತ್ತವರು ಅಥವಾ ರಕ್ಷಕರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವುದು ಹೆತ್ತವರ ಅಥವಾ ಪೋಷಕರ ಇಚ್ಛೆಗೆ ಬಿಟ್ಟಿದ್ದು ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವಂತೆ ವಿದ್ಯಾ ಸಂಸ್ಥೆಗಳು ಒತ್ತಡ ಹೇರುವಂತಿಲ್ಲ ಎಂದು ಮಾರ್ಗಸೂಚಿಯನ್ನು ತಿಳಿಸಲಾಗಿದೆ.
ಪ್ರಯೋಗ ಅಥವಾ ಲ್ಯಾಬ್‌ ಕಾರ್ಯ ಅವಶ್ಯವಾಗಿರುವ ವಿಜ್ಞಾನ, ಪಿಎಚ್‌ಡಿ ಅಥವಾ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉನ್ನತ ಸಂಸ್ಥೆಯನ್ನು ತೆರೆಯಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಆಸನದ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಎಲ್ಲಾ ಸಂದರ್ಭದಲ್ಲೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೆಯೇ ಶಾಲಾ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸದಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...